August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಕಿರಿಯ ತರಗತಿಯ ಪುಟಾಣಿ ಮಕ್ಕಳಿಗಾಗಿ ಕಲರ್ಸ್ ಡೇ’ (ಬಣ್ಣಗಳ ದಿನ)ವನ್ನು ವಿನೂತನವಾಗಿ ಆಚರಿಸಲಾಯಿತು.

ಶಾಲೆಯ ಹೆಮ್ಮೆಯ ಬ್ಯಾಂಡ್ ವಾದನದೊಂದಿಗೆ ಪುಟಾಣಿ ಮಕ್ಕಳನ್ನು ಅವರ ಪೋಷಕರ ಸಹಿತವಾಗಿ ಅನುಗ್ರಹ ಶಾಲೆಯ ಮಹಾದ್ವಾರದಿಂದ ಸಭಾಭವನದವರೆಗೆ ಶಿಸ್ತುಬದ್ಧವಾಗಿ ಕರೆತರಲಾಯಿತು. ಬಳಿಕ ಪುಟಾಣಿ ಮಕ್ಕಳ ಸುಂದರವಾದ ಪ್ರಾರ್ಥನಾ ನೃತ್ಯದೊಂದಿಗೆ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಪುಟಾಣಿ ವಿದ್ಯಾರ್ಥಿಗಳು ಗಣ್ಯರನ್ನು ಸ್ವಾಗತಿಸಿದರು. ವಿಭಿನ್ನ ಹಾಗೂ ಆಕರ್ಷಕ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀಮತಿ ಮೋನಿಕಾ ಐವನ್ ಮೆನೆಜಸ್ ಅವರು ಮಾತನಾಡಿ, ಬಣ್ಣಗಳ ಮಹತ್ವ ಹಾಗೂ ಮಕ್ಕಳ ಜೀವನದಲ್ಲಿ ಅವುಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಮಕ್ಕಳನ್ನು ಪ್ರೀತಿ, ಕಾಳಜಿ ಹಾಗೂ ಪ್ರೋತ್ಸಾಹದೊಂದಿಗೆ ಬೆಳೆಸುವ ಅಗತ್ಯವನ್ನು ಅವರು ತಿಳಿಸಿದರು.

ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಅವರು ಮಾತನಾಡಿ, ಕಲರ್ಸ್ ಡೇ ಆಚರಣೆಯ ಮಹತ್ವವನ್ನು ವಿವರಿಸಿದರು. ಪುಟಾಣಿ ಮಕ್ಕಳ ಉತ್ಸಾಹಭರಿತ ಭಾಗವಹಿಸುವಿಕೆ ಹಾಗೂ ಅವರ ಸೃಜನಶೀಲ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಕ್ಕಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ವಂ.ಫಾ. ಡಾ. ವಿಜಯ್ ಲೋಬೊ, ಪಾಲನಾ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜಾ, ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷ ಶಶಿಕಿರಣ್ ಜೈನ್ ಹಾಗೂ ಶಿಕ್ಷಕಿ ಗ್ರೇಸಿ ಸಲ್ದಾನ ಅವರು, ಆಡಳಿತ ಮಂಡಳಿಯ ಸದಸ್ಯರಾದ ಬಬಿತಾ ಮೋರಸ್, ಸ್ಟೀವನ್ ಮೊಂತೇರೊ, ಜೈಸನ್ ಮೋರಸ್  ಉಪಸ್ಥಿತರಿದ್ದರು.

ವಿದ್ಯಾರ್ಥಿ ಸುಹಾನ್ ಮೊಂತೇರೋ  ಕಾರ್ಯಕ್ರಮವನ್ನು ನಿರೂಪಿಸಿದರು.

ಪುಟಾಣಿ ಮಕ್ಕಳಿಂದ ವಿವಿಧ ಬಣ್ಣಗಳನ್ನು ಪ್ರತಿಬಿಂಬಿಸುವ ಆಕರ್ಷಕ ವಸ್ತ್ರಾಲಂಕಾರ ಹಾಗೂ ಮನಮೋಹಕ ನೃತ್ಯ ಪ್ರದರ್ಶನ ನಡೆಯಿತು. ವಿವಿಧ ಬಣ್ಣಗಳ ಉಡುಪುಗಳಲ್ಲಿ ಕಂಗೊಳಿಸಿದ ಮಕ್ಕಳ ನೃತ್ಯ, ನಗು ಹಾಗೂ ಉತ್ಸಾಹಭರಿತ ಪ್ರದರ್ಶನವು ನೆರೆದಿದ್ದ ಪೋಷಕರು ಮತ್ತು ಅತಿಥಿಗಳನ್ನು ವಿಶೇಷವಾಗಿ ರಂಜಿಸಿತು.

Related posts

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!