August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿವೃತ್ತ ಶಿಕ್ಷಕ ಶಂಕರ್ ಎನ್. ತಾಮನ್ಕರ್ ಅವರಿಂದ ರೂ.47 ಸಾವಿರ ಧನಸಹಾಯ

ಮುಂಡಾಜೆ: ನಿವೃತ್ತ ಶಿಕ್ಷಕ ಹಾಗೂ ಕವಿ ಶಂಕರ್ ಎನ್. ತಾಮನ್ಕರ್ ಅವರು ತಮ್ಮ ತಂದೆ ದಿ. ನಾರಾಯಣ ತಾಮನ್ಕರ್ ಅವರ ಸ್ಮರಣಾರ್ಥ ಪ್ರತಿವರ್ಷ ನೀಡುವ ಶೈಕ್ಷಣಿಕ ಹಾಗೂ ಆರೋಗ್ಯ ಸಹಾಯದ ಅಂಗವಾಗಿ ಈ ಬಾರಿ ಎಂಟು ಅರ್ಹ ಫಲಾನುಭವಿಗಳಿಗೆ ಒಟ್ಟು ರೂ.47 ಸಾವಿರ ಧನಸಹಾಯವನ್ನು ವಿತರಿಸಿದರು.

ಆ.2ರಂದು ಊರಿನ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರು ವಿದ್ಯಾರ್ಥಿಗಳಿಗೆ ತಲಾ ರೂ.5 ಸಾವಿರದಂತೆ ಶೈಕ್ಷಣಿಕ ನೆರವು ನೀಡಲಾಯಿತು. ಉಳಿದ ರೂ.17 ಸಾವಿರವನ್ನು ಸಮಾಜ ಸೇವಾ ಸಂಸ್ಥೆಗಳಿಗೆ ಸಹಾಯಧನವಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಅರೆಕ್ಕಲ್ ರಾಮಚಂದ್ರ ಭಟ್, ರಾಘವೇಂದ್ರ ತಾಮನ್ಕರ್, ನಾಮದೇವ ರಾವ್ ಸೇರಿದಂತೆ ತಾಮನ್ಕರ್ ಕುಟುಂಬದ ಬಂಧುಗಳು ಉಪಸ್ಥಿತರಿದ್ದರು.

ಶಂಕರ್ ಎನ್. ತಾಮನ್ಕರ್ ಅವರ ಸಮಾಜಮುಖಿ ಹಾಗೂ ಉದಾತ್ತ ಕಾರ್ಯವು ಇತರರಿಗೂ ಮಾದರಿಯಾಗಲಿ ಎಂದು ಗಣ್ಯರು ಹಾರೈಸಿದರು.

Related posts

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ವಿ.ಹಿಂ.ಪ. ರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಜಿ.

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya
error: Content is protected !!