ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯ ವೇದಿಕೆಯಲ್ಲಿ ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪಡಂಗಡಿ ಸೊಸೈಟಿಯಿಂದ ಸನ್ಮಾನವನ್ನು ನೆರವೇರಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರವರು ಕಳೆದ ಎರಡು ಅವಧಿಯಲ್ಲಿ ಶಾಸಕನಾಗಿ ಕ್ಷೇತ್ರದ ಅಮೂಲಾಗ್ರ ಅಭಿವೃದ್ಧಿಗೆ ಸಹಕರಿಸಿದ್ದೇನೆ. ಪಡಂಗಡಿ- ಗರ್ಡಾಡಿ ನನ್ನ ಊರು. ಹಾಗಾಗಿ ಈ ಸನ್ಮಾನ ನನ್ನೂರಿನ ಸಮಸ್ತ ಜನತೆಗೆ ಅರ್ಪಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಸೊಸೈಟಿ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್, ಉಪಾಧ್ಯಕ್ಷ ನರೇಂದ್ರ ಕುಮಾರ್, ಸಿಇಒ ಸುಕೇಶಿನಿ, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ, ಉಮೇಶ್, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸುದರ್ಶನ್ ಹಾಗೂ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.











