ಮುಂಡಾಜೆ: ಸಂಘದ ವತಿಯಿಂದ ಕೃಷಿಕರಿಗೆ ಸದುಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,757 ಕೋಟಿ ರೂ.ವಾರ್ಷಿಕ ವಹಿವಾಟು ನಡೆಸಿದ್ದು 2.53 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ. ಈ ಬಾರಿ ಸದಸ್ಯರಿಗೆ ಶೇ.15 ಡಿವಿಡೆಂಟ್ ನೀಡಲಾಗುವುದು ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ ನಾರಾಯಣ ಕೆ. ತಿಳಿಸಿದರು.
ಅವರು ಆ.29ರಂದು ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಠಾರದಲ್ಲಿ ಜರಗಿದ ಸಂಘದ 106ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
6,413 ಮಂದಿ ಎ ತರಗತಿ ಸದಸ್ಯರನ್ನು, 8,505 ಸಿ ಹಾಗೂ 673 ಡಿ ಸದಸ್ಯರನ್ನು ಹೊಂದಿರುವ ಸಂಘದಲ್ಲಿ 8.70 ಕೋಟಿ ರೂ.ಗಿಂತ ಅಧಿಕ ಪಾಲು ಬಂಡವಾಳ 86.67 ಕೋಟಿ ರೂ.ಠೇವಣಿ ಹೊಂದಿದೆ. ಕಳೆದ 14 ವರ್ಷದಿಂದ ಸಂಘವು ನಿರಂತರ 100 ಶೇ. ವಸೂಲಾತಿಯನ್ನು ದಾಖಲಿಸಿದೆ. ಕಾಡಾನೆಗಳ ಹಾವಳಿಯಿಂದ ಕೃಷಿ ಹಾನಿಯಾದ ಸದಸ್ಯರಿಗೆ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ,ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ,ಎಂ.ಶಶಿಧರ ಕಲ್ಮಂಜ,ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಚೆನ್ನಕೇಶವ ನಾಯ್ಕ, ಅಜಯ್ ಕೆ.ಎ., ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ, ಮೋಹಿನಿ, ವೃತ್ತಿಪರ ನಿರ್ದೇಶಕರಾದ ನಾರಾಯಣ ಫಡಕೆ, ಬಾಬು ಗೌಡ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಕಾರ್ಯಕ್ರಮ ನಿರ್ವಹಿಸಿದರು.











