August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಮುಂಡಾಜೆ: ಸಂಘದ ವತಿಯಿಂದ ಕೃಷಿಕರಿಗೆ ಸದುಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,757 ಕೋಟಿ ರೂ.ವಾರ್ಷಿಕ ವಹಿವಾಟು ನಡೆಸಿದ್ದು 2.53 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ. ಈ ಬಾರಿ ಸದಸ್ಯರಿಗೆ ಶೇ.15 ಡಿವಿಡೆಂಟ್ ನೀಡಲಾಗುವುದು ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ ನಾರಾಯಣ ಕೆ. ತಿಳಿಸಿದರು.

ಅವರು ಆ.29ರಂದು ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಠಾರದಲ್ಲಿ ಜರಗಿದ ಸಂಘದ 106ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

6,413 ಮಂದಿ ಎ ತರಗತಿ ಸದಸ್ಯರನ್ನು, 8,505 ಸಿ ಹಾಗೂ 673 ಡಿ ಸದಸ್ಯರನ್ನು ಹೊಂದಿರುವ ಸಂಘದಲ್ಲಿ 8.70 ಕೋಟಿ ರೂ.ಗಿಂತ ಅಧಿಕ ಪಾಲು ಬಂಡವಾಳ 86.67 ಕೋಟಿ ರೂ.ಠೇವಣಿ ಹೊಂದಿದೆ. ಕಳೆದ 14 ವರ್ಷದಿಂದ ಸಂಘವು ನಿರಂತರ 100 ಶೇ. ವಸೂಲಾತಿಯನ್ನು ದಾಖಲಿಸಿದೆ. ಕಾಡಾನೆಗಳ ಹಾವಳಿಯಿಂದ ಕೃಷಿ ಹಾನಿಯಾದ ಸದಸ್ಯರಿಗೆ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ,ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ,ಎಂ.ಶಶಿಧರ ಕಲ್ಮಂಜ,ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಚೆನ್ನಕೇಶವ ನಾಯ್ಕ, ಅಜಯ್ ಕೆ.ಎ., ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ, ಮೋಹಿನಿ, ವೃತ್ತಿಪರ ನಿರ್ದೇಶಕರಾದ ನಾರಾಯಣ ಫಡಕೆ, ಬಾಬು ಗೌಡ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!