August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ವಿದ್ಯಾರ್ಥಿಗಳಿಗೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ಚಿಕಿತ್ಸೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿ, ಪ್ರೊಜೆಕ್ಟರ್ ಮೂಲಕ ಸಂಬಂಧಿತ ವಿಡಿಯೋವನ್ನು ಪ್ರದರ್ಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಮಾತನಾಡಿ, ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು, ಅಗತ್ಯ ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತಿಳಿದಿರುವ ಮಾಹಿತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳಾದ ಮೋನಪ್ಪ ಗೌಡ ಮತ್ತು ರಂಜಿತ್ ಕುಮಾರ್, ಶಾಲಾ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

ಜೂನಿಯರ್ ರೆಡ್ ಕ್ರಾಸ್ ಸಂಯೋಜಕರಾದ ವಿಶ್ವನಾಥ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನಿಶಾನ್ಯ ಅತಿಥಿಗಳ ಪರಿಚಯ ಮಾಡಿದರು. ಧನ್ವಿನ್ ವಂದಿಸಿದರು. ಕಾವ್ಯ ಮತ್ತು ಭಾಗ್ಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಾನಂದ ಪ್ರಭು ಅವರಿಗೆ ಶ್ರದ್ಧಾಂಜಲಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಭಗವದ್ಗೀತಾ ತರಬೇತಿ ಪ್ರಾರಂಭೋತ್ಸವ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya
error: Content is protected !!