ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿಯ ಆಚರಣೆ ಯನ್ನು ಸಂಘದ ಪ್ರಧಾನ ಕಛೇರಿಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಸಿಬ್ಬಂದಿಗಳು ಹಾಗೂ ಮಾತೃಶ್ರೀ ಸತ್ಸಂಗ ಭಜನಾ ಮಂಡಳಿ ದೇವಿನಗರ, ಪಚ್ಚನಾಡಿ ಇಲ್ಲಿಯ ಸದಸ್ಯರು ಭಜನಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನಡೆಸಿಕೊಟ್ಟರು. ಪುರೋಹಿತರಾದ ಶ್ರೀಯುತ ಮನೋಜ್ ಶಾಂತಿ ಇವರು ಗುರುಪೂಜೆ ನಡೆಸಿ, ನಂತರ ಪ್ರಸಾದ ವಿತರಣೆಯನ್ನು ನಡೆಸಿದರು.

ಗುರುವಂದನಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಸದಸ್ಯರು ಹಾಗೂ ಗುರು ಶ್ರೇಷ್ಠರಾದ ಶ್ರೀ ಮಾಧವ ಸುವರ್ಣ ಯು. ಇವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ , ನಿರ್ದೇಶಕರುಗಳಾದ ಜಿ. ಪರಮೇಶ್ವರ ಪೂಜಾರಿ, ಆನಂದ ಎಸ್ ಕೊಂಡಾಣ, ರಮಾನಾಥ್ ಸನಿಲ್, ಗೋಪಾಲ್ ಎಮ್, ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವಧ್ಯಕ್ಷ ವಾಮನ್ ಕೆ ಹಾಗೂ ಸಂಘದ ಸದಸ್ಯರುಗಳು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು..











