August 29, 2026
ಆಯ್ಕೆಕ್ರೀಡಾ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಚೆಸ್ ಸ್ಪರ್ಧೆ: ಎಲ್.ಸಿ.ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ನಮನ್ ಸಿ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು ದಕ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಮತ್ತು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿ ಯೊಳಗಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಚೆಸ್ ಪಂದ್ಯಾಟ ವನ್ನು ಆ.28ರಂದು ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿಯಲ್ಲಿ ನಡೆಸಲಾಯಿತು.

ಎಲ್. ಸಿ.ಆರ್ ವಿದ್ಯಾಸಂಸ್ಥೆಯ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿ ನಮನ್ ಸಿ. ಶೆಟ್ಟಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿ ತೃತೀಯ ಸ್ಥಾನ ಗಳಿಸಿ ಕೊಪ್ಪಳದಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹರಿಣಾಕ್ಷಿ ತರಬೇತಿಯನ್ನು ನೀಡಿರುತ್ತಾರೆ.

ಇವರು ಎಂ ಚಂದ್ರಹಾಸ ಶೆಟ್ಟಿ ಮತ್ತು ವಿನಯ ರೈ ದಂಪತಿ ಪುತ್ರ, ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲ ಜೋಸ್ಟನ್ ಲೋಬೋ ಸಂಯೋಜಕ ಯಶವಂತ್ ಜಿ. ನಾಯಕ್ ಹಾಗೂ ಮುಖ್ಯೋಪಾಧ್ಯಾಯಿನಿ ವಿಜಯ ಕೆ ಅಭಿನಂದಿಸಿದ್ದಾರೆ .

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya
error: Content is protected !!