ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಗುಮಾಸ್ತರಾಗಿ, ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತಿ ಹೊಂದಿದ ಚಂದ್ರಕಾಂತ ಗೌಡ ಎ. ಇವರಿಗೆ ಬೀಳ್ಕೊಡುಗೆ ಸಮಾರಂಭ ಆ. 29ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಸುಮಾ ಚಂದ್ರಕಾಂತ ಗೌಡ ಎ., ಸಂಘದ ಉಪಾಧ್ಯಕ್ಷ ಆನಂದ ಗೌಡ ಬಿ., ನಿರ್ದೇಶಕರಾದ ಕೆ.ಪುಷ್ಪಲತಾ, ಕೆ.ವಸಂತ ಗೌಡ, ರಮೇಶ್ ಕೆಂಗಾಜೆ, ವಿನಯಚಂದ್ರ,ರಘುನಾಥ,ಸತೀಶ್ ನಾಯ್ಕ, ಶೀನಪ್ಪ ಗೌಡ, ಹರೀಶ್ ಪೂಜಾರಿ, ಪ್ರಮೋದ್ ಕುಮಾರ್ ಹಾಗೂ ವೇದಾವತಿ ಉಪಸ್ಥಿತರಿದ್ದರು.
ಸಿಇಒ ದಯಾನಂದ ಶೆಟ್ಟಿಗಾರ್ ಕೆ. ಸನ್ಮಾನ ಪತ್ರ ವಾಚಿಸಿದರು. ಮಲ್ಲಿಕಾ ಮಿತ್ತಬಾಗಿಲು ಪ್ರಾರ್ಥಿಸಿದರು. ಸಿಬ್ಬಂದಿಗಳಾದ ರಮಾನಂದ ಮತ್ತು ಸತೀಶ್ ಸಾಲಿಯಾನ್ ನಾವೂರ ಕಾರ್ಯಕ್ರಮ ನಿರೂಪಿಸಿದರು. ಸದಸ್ಯರು , ಸಿಬಂದಿ ವರ್ಗದವರು ಉಪಸ್ಥಿತರಿದ್ದರು.











