ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್ಗೆ ಹೋಗುವ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.
ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಎಚ್ಚೆತ್ತ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ನಾಗರೀಕರು ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.











