August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ: ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.

ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಎಚ್ಚೆತ್ತ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ನಾಗರೀಕರು ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

Related posts

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya
error: Content is protected !!