August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್‌ನಲ್ಲಿ ಸಂಭ್ರಮದ ರಕ್ಷಾಬಂಧನ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಸಹೋದರ ಭಾವೈಕ್ಯತೆಯ ಸಂಕೇತವಾದ ರಕ್ಷಾಬಂಧನ ಕಾರ್ಯಕ್ರಮ ಆ.28ರಂದು ಸಂಭ್ರಮದಿಂದ ನಡೆಯಿತು.

ಮಳಿಗೆಯ ಮಹಿಳಾ ಸಿಬ್ಬಂದಿಗಳು ಸಹೋದರ ಸಿಬ್ಬಂದಿಗಳಿಗೆ ಆರತಿ ಎತ್ತಿ, ತಿಲಕವಿಟ್ಟು ರಕ್ಷೆ ಕಟ್ಟಿ ಸಹೋದರತ್ವದ ಭಾವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ. ಕೋಟ್ಯಾನ್ ಬಳಂಜ ಮಾತನಾಡಿ, ಭಾರತೀಯ ಸನಾತನ ಧರ್ಮದ ಆಚಾರ-ವಿಚಾರಗಳು ಶ್ರೀಮಂತವಾಗಿದ್ದು, ಸಹೋದರಿಯ ರಕ್ಷಣೆ, ಪ್ರೀತಿ, ಭಾವೈಕ್ಯತೆ ಹಾಗೂ ಸಹೋದರತ್ವದ ಸಂಕೇತವೇ ರಕ್ಷಾಬಂಧನ. ಸೋಜಾ ಸಂಸ್ಥೆಯು ಭಾರತೀಯತೆಯನ್ನು ಪ್ರತಿಪಾದಿಸುತ್ತಾ ಸರ್ವಧರ್ಮಗಳ ಹಬ್ಬಗಳನ್ನು ತನ್ನ ಸಿಬ್ಬಂದಿಯೊಂದಿಗೆ ಆಚರಿಸಿ ಎಲ್ಲರೊಂದಿಗೆ ಬೆರೆಯುತ್ತಿರುವುದು ಗಮನಾರ್ಹ ಎಂದರು.

ಸೋಜಾ ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋ ಮಾತನಾಡಿ, ಜಾತಿ, ಮತ, ಧರ್ಮಗಳ ಸಂಘರ್ಷದಿಂದ ಮಾನವೀಯತೆ ಕ್ಷೀಣಿಸುತ್ತಿದೆ. ಭಾರತೀಯರಾದ ನಾವು ಇಲ್ಲಿ ವಾಸಿಸುವ ಎಲ್ಲರ ಧರ್ಮ ಮತ್ತು ಆಚರಣೆಗಳನ್ನು ಗೌರವಿಸಿ, ಸಮಾನತೆ ಹಾಗೂ ಸಹೋದರತ್ವದಿಂದ ಬಾಳಬೇಕು. ನಮ್ಮಲ್ಲಿ ಪರಸ್ಪರ ಒಡನಾಟ ಮತ್ತು ಭಾವೈಕ್ಯತೆಯ ಸಂಬಂಧಗಳು ರೂಢಿಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಇಂಜಿನಿಯರ್ ರಾಹುಲ್, ಸುದ್ದಿ ಉದಯ ಪತ್ರಿಕೆಯ ವರದಿಗಾರ ಮನೀಷ್ ಅಂಚನ್, ಸೋಜಾ ಸಂಸ್ಥೆಯ ಮ್ಯಾನೇಜರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya
error: Content is protected !!