August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

ಮುಂಡಾಜೆ: ಸಂಘದ ವತಿಯಿಂದ ಕೃಷಿಕರಿಗೆ ಸದುಪಯೋಗವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಸಂಘವು 1,757 ಕೋಟಿ ರೂ.ವಾರ್ಷಿಕ ವಹಿವಾಟು ನಡೆಸಿದ್ದು 2.53 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ. ಈ ಬಾರಿ ಸದಸ್ಯರಿಗೆ ಶೇ.15 ಡಿವಿಡೆಂಟ್ ನೀಡಲಾಗುವುದು ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ ನಾರಾಯಣ ಕೆ. ತಿಳಿಸಿದರು.

ಅವರು ಆ.29ರಂದು ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಠಾರದಲ್ಲಿ ಜರಗಿದ ಸಂಘದ 106ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

6,413 ಮಂದಿ ಎ ತರಗತಿ ಸದಸ್ಯರನ್ನು, 8,505 ಸಿ ಹಾಗೂ 673 ಡಿ ಸದಸ್ಯರನ್ನು ಹೊಂದಿರುವ ಸಂಘದಲ್ಲಿ 8.70 ಕೋಟಿ ರೂ.ಗಿಂತ ಅಧಿಕ ಪಾಲು ಬಂಡವಾಳ 86.67 ಕೋಟಿ ರೂ.ಠೇವಣಿ ಹೊಂದಿದೆ. ಕಳೆದ 14 ವರ್ಷದಿಂದ ಸಂಘವು ನಿರಂತರ 100 ಶೇ. ವಸೂಲಾತಿಯನ್ನು ದಾಖಲಿಸಿದೆ. ಕಾಡಾನೆಗಳ ಹಾವಳಿಯಿಂದ ಕೃಷಿ ಹಾನಿಯಾದ ಸದಸ್ಯರಿಗೆ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ,ನಿರ್ದೇಶಕರಾದ ವೆಂಕಟೇಶ್ವರ ಭಟ್ ಕಜೆ,ಎಂ.ಶಶಿಧರ ಕಲ್ಮಂಜ,ರಾಘವ ಕಲ್ಮಂಜ, ಶಿವಪ್ರಸಾದ್ ಗೌಡ ದೇವಸ್ಯ, ರವಿ ಪೂಜಾರಿ, ಚೆನ್ನಕೇಶವ ನಾಯ್ಕ, ಅಜಯ್ ಕೆ.ಎ., ಅಶ್ವಿನಿ ಎ.ಹೆಬ್ಬಾರ್, ಸುಮಾ ಗೋಖಲೆ, ಮೋಹಿನಿ, ವೃತ್ತಿಪರ ನಿರ್ದೇಶಕರಾದ ನಾರಾಯಣ ಫಡಕೆ, ಬಾಬು ಗೌಡ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ರಾಘವ ಗೌಡ ಕುಡುಮಡ್ಕ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಪರಾಂಜಪೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ ಸಂಪರ್ಕ ರಸ್ತೆಯಲ್ಲಿ ಮತ್ತೆ ಉರುಳಿ ಬಿದ್ದ ಮರ: ಪರದಾಡಿದ ಶಾಲಾ ಮಕ್ಕಳು

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!