August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ವತಿಯಿಂದ ಪ್ರಥಮ ಚಿಕಿತ್ಸಾ ಮಾಹಿತಿ ಕಾರ್ಯಾಗಾರ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕದ ವತಿಯಿಂದ ಪ್ರಥಮ ಚಿಕಿತ್ಸೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, ಉಜಿರೆಯ ಉಪನ್ಯಾಸಕ ಅವನೀಶ್ ವಿದ್ಯಾರ್ಥಿಗಳಿಗೆ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪ್ರಥಮ ಚಿಕಿತ್ಸೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿ, ಪ್ರೊಜೆಕ್ಟರ್ ಮೂಲಕ ಸಂಬಂಧಿತ ವಿಡಿಯೋವನ್ನು ಪ್ರದರ್ಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಟಿ. ಮಾತನಾಡಿ, ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು, ಅಗತ್ಯ ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತಿಳಿದಿರುವ ಮಾಹಿತಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳಾದ ಮೋನಪ್ಪ ಗೌಡ ಮತ್ತು ರಂಜಿತ್ ಕುಮಾರ್, ಶಾಲಾ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

ಜೂನಿಯರ್ ರೆಡ್ ಕ್ರಾಸ್ ಸಂಯೋಜಕರಾದ ವಿಶ್ವನಾಥ್ ಪ್ರಾಸ್ತಾವಿಸಿ, ಸ್ವಾಗತಿಸಿದರು. ವಿದ್ಯಾರ್ಥಿಗಳಾದ ನಿಶಾನ್ಯ ಅತಿಥಿಗಳ ಪರಿಚಯ ಮಾಡಿದರು. ಧನ್ವಿನ್ ವಂದಿಸಿದರು. ಕಾವ್ಯ ಮತ್ತು ಭಾಗ್ಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೋನಿಕ್ ಸೌಂಡ್ ಗಳ ಉಚ್ಚಾರಣೆ ಮತ್ತು ಬಳಕೆ ಬಗ್ಗೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!