ಬೆಳ್ತಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಇವರ ಅಧ್ಯಕ್ಷತೆಯಲ್ಲಿ ಆ.29 ರಂದು ನಡೆಯಿತು.

ಆರ್ಥಿಕ ವರ್ಷದಲ್ಲಿ ಸಂಘವು ರೂ 204 ಕೋಟಿ ವ್ಯವಹಾರ ನಡೆಸಿ,ರೂ1.9 ಕೋಟಿ ನಿವ್ವಳ ಲಾಭ ಗಳಿಸಿದೆ.ಸದಸ್ಯರಿಗೆ ಶೇ 16.5 ಡಿವಿಡೆಂಟ್ ನೀಡಲಾಗುವುದು ಎಂದು ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಹೇಳಿದರು.
ವರದಿ ಸಾಲಿನಲ್ಲಿ ಸಂಘವು ರೈತ ಸದಸ್ಯರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಸದಸ್ಯರು ಪ್ರಯೋಜನ ಪಡೆಯಬಹುದಾಗಿದೆ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್, ಸಿಇಒ ಸುಕೇಶಿನಿ, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ., ರಾಮು, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ, ಉಮೇಶ್, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸುದರ್ಶನ್, ಸೊಸೈಟಿ ಲೆಕ್ಕಿಗ ಸುಜಯ, ಮಾಜಿ ಅಧ್ಯಕ್ಷರುಗಳು,ಸಿಬ್ಬಂದಿಗಳಾದ ಉಮೇಶ್, ಆನಂದ, ರಂಜಿತ್ ಸೇರಿದಂತೆ ಸೊಸೈಟಿ ಸದಸ್ಯರು ಉಪಸ್ಥಿತರಿದ್ದರು.











