ಕಣಿಯೂರು: ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ಇದರ ಮಾಲಕ ಗೋಪಾಲ ಗೌಡರು ಬಕೆಟ್ ಹಾಗೂ ಇನ್ನಿತರ ನಿತ್ಯೋಪಯೋಗಿ ಪರಿಕರ ವಸ್ತುಗಳನ್ನು ಕೊಡುಗೆಯಾಗಿ ನೀಡಿ ಪಾಲನಾ ಕೇಂದ್ರಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಾಲನಾ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







