August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್‌ನಲ್ಲಿ ಸಂಭ್ರಮದ ರಕ್ಷಾಬಂಧನ

ಬೆಳ್ತಂಗಡಿ: ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ಸಹೋದರ ಭಾವೈಕ್ಯತೆಯ ಸಂಕೇತವಾದ ರಕ್ಷಾಬಂಧನ ಕಾರ್ಯಕ್ರಮ ಆ.28ರಂದು ಸಂಭ್ರಮದಿಂದ ನಡೆಯಿತು.

ಮಳಿಗೆಯ ಮಹಿಳಾ ಸಿಬ್ಬಂದಿಗಳು ಸಹೋದರ ಸಿಬ್ಬಂದಿಗಳಿಗೆ ಆರತಿ ಎತ್ತಿ, ತಿಲಕವಿಟ್ಟು ರಕ್ಷೆ ಕಟ್ಟಿ ಸಹೋದರತ್ವದ ಭಾವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ. ಕೋಟ್ಯಾನ್ ಬಳಂಜ ಮಾತನಾಡಿ, ಭಾರತೀಯ ಸನಾತನ ಧರ್ಮದ ಆಚಾರ-ವಿಚಾರಗಳು ಶ್ರೀಮಂತವಾಗಿದ್ದು, ಸಹೋದರಿಯ ರಕ್ಷಣೆ, ಪ್ರೀತಿ, ಭಾವೈಕ್ಯತೆ ಹಾಗೂ ಸಹೋದರತ್ವದ ಸಂಕೇತವೇ ರಕ್ಷಾಬಂಧನ. ಸೋಜಾ ಸಂಸ್ಥೆಯು ಭಾರತೀಯತೆಯನ್ನು ಪ್ರತಿಪಾದಿಸುತ್ತಾ ಸರ್ವಧರ್ಮಗಳ ಹಬ್ಬಗಳನ್ನು ತನ್ನ ಸಿಬ್ಬಂದಿಯೊಂದಿಗೆ ಆಚರಿಸಿ ಎಲ್ಲರೊಂದಿಗೆ ಬೆರೆಯುತ್ತಿರುವುದು ಗಮನಾರ್ಹ ಎಂದರು.

ಸೋಜಾ ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋ ಮಾತನಾಡಿ, ಜಾತಿ, ಮತ, ಧರ್ಮಗಳ ಸಂಘರ್ಷದಿಂದ ಮಾನವೀಯತೆ ಕ್ಷೀಣಿಸುತ್ತಿದೆ. ಭಾರತೀಯರಾದ ನಾವು ಇಲ್ಲಿ ವಾಸಿಸುವ ಎಲ್ಲರ ಧರ್ಮ ಮತ್ತು ಆಚರಣೆಗಳನ್ನು ಗೌರವಿಸಿ, ಸಮಾನತೆ ಹಾಗೂ ಸಹೋದರತ್ವದಿಂದ ಬಾಳಬೇಕು. ನಮ್ಮಲ್ಲಿ ಪರಸ್ಪರ ಒಡನಾಟ ಮತ್ತು ಭಾವೈಕ್ಯತೆಯ ಸಂಬಂಧಗಳು ರೂಢಿಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಇಂಜಿನಿಯರ್ ರಾಹುಲ್, ಸುದ್ದಿ ಉದಯ ಪತ್ರಿಕೆಯ ವರದಿಗಾರ ಮನೀಷ್ ಅಂಚನ್, ಸೋಜಾ ಸಂಸ್ಥೆಯ ಮ್ಯಾನೇಜರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಮಾಲಾಡಿ: ಪೆರ್ಡೆ ಕ್ರಾಸ್ – ಊರ್ಲ ರಸ್ತೆ ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಕಡಿರುದ್ಯಾವರ ಬಿಜು ತೋಮಸ್ ರವರ ಬಾಳೆ ಕೃಷಿ ಗಾಳಿ ಮಳೆಗೆ ಸರ್ವನಾಶ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya
error: Content is protected !!