26.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

ಬೆಳ್ತಂಗಡಿ; ದೇವರು ಮಳೆಯ ರೂಪದಲ್ಲಿ ನಮಗೆ ನೀಡುವ ಜಲ ಅದು ನಮ್ಮೆಲ್ಲರ ಜೀವಜಲ. ಅದನ್ನು ಸಂರಕ್ಷಿಸಿ ಸುಂದರ ಪ್ರಕೃತಿಯನ್ನು ನಾಳೆಗೆ ಉಳಿಸಿಹೋಗಬೇಕು, ಇಂದು ಇಲ್ಲಿ ಇಂಗಿಸಿದ ನೀರು ಯಾರಿಗೂ ಕೂಡ ಪ್ರಯೋಜನ ಆಗಬಹುದು,ನಮಗೆ ನೀರನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ ಆದರೆ ದೇವರು ಕೊಟ್ಟ ನೀರನ್ನು ಉಳಿಯುವುದು ಸಾಧ್ಯವಿದೆ, ಮನೆಯಲ್ಲಿ ಇರುವಂತಹ ವ್ಯವಸ್ಥೆಗೆ ಪೂರಕವಾಗಿ ಬಾವಿಗೆ ಕೆರೆಗೆ ಬೋರ್ವೆಲ್ಗೆ ನೀರು ಇಂಗಿಸಿದಾಗ,ಅದು ಅಂತರ್ಜಲದ ಕೊರತೆಯನ್ನು ನೀಗಿಸಿ, ಪರಿಶುದ್ಧವಾದ ನೀರು ನಮಗೆ ಮರುಬಳಕೆಗೆ ಸಿಗುತ್ತದೆ ಎಂದು ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ಪ್ರಧಾನ ಧರ್ಮಗುರು ರೆ.ಫಾ ವಾಲ್ಟರ್ ಡಿಮೆಲ್ಲೋ ಹೇಳಿದರು.ಇಲ್ಲಿನ ಚರ್ಚ್ ವಠಾರದಲ್ಲಿ ಆ.30 ರಂದು ನಡೆದ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆಯಿಂದ ಅವರು ಆಶೀರ್ವಚನ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬೆಳ್ತಂಗಡಿ,ಚರ್ಚ್ ಪಾಲನಾ ಮಂಡಳಿಸರಕಾರಿ ಪ್ರಥಮ ದರ್ಜೆ ಕಾಲೇಜು ಎನ್.ಎಸ್.ಎಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳು ಜಂಟಿ ಸಹಯೋಗ ನೀಡಿದವು. ಪ್ರಸ್ತಾವನೆಗೈದ ಗ್ರಾ. ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್, ಜಲ ಸಂರಕ್ಷಣೆಯ ಮಾದರಿಯನ್ನು ಈ ಚರ್ಚ್ ನಲ್ಲಿ ಕಳೆದ ಮೂರು ವರ್ಷಗಳಿಂದ ಅನುಷ್ಠಾನಿಸಲಾಗಿದೆ. ಇದು ಮುಕ್ತ ವೇದಿಕೆಯಾಗಿದ್ದು ಇಲ್ಲಿ ಯಾರೂ ಕೂಡ ಬಂದು ಇದನ್ನು ಕಣ್ಣಾರೆ ಕಂಡು ಮಾಹಿತಿ ಪಡೆದು ಅನುಭವ ಪಡೆದುಕೊಳ್ಳಬಹುದು. ಇಲ್ಲಿ ಕಳೆದ ಬಾರಿ 25 ಲಕ್ಷ ಲೀಟರ್ ನೀರು ಶುದ್ದೀಕರಿಸಿ ಅಂತರ್ಜಲಕ್ಕೆ ಮರುಪೂರಣ ಮಾಡಲಾಗಿದೆ ಎಂದರು.

ಪ್ರಧಾನ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮಾತನಾಡಿ, 3 ಸಾವಿರ ಮಿ.‌ಮೀ ಮಳೆಯಾಗುವ ಕರಾವಳಿ ಜಿಲ್ಲೆಯವರಾದ ನಾವೂ ಕೂಡ ಇಂದು ಬೇಸಗೆಯಲ್ಲಿ ಜಲಕ್ಷ್ಯಾಮ ಎದುರಿಸುವಂತಾಗಿರುವುದು ಖೇದಕರ. ಮಳೆ ನೀರಿನ ಪ್ರತೀ ಹನಿಯ ಬಗ್ಗೆಯೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಇದೆ. ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಕನಿಷ್ಠ ಖರ್ಚಿಗೆ ಮಳೆಕೊಯ್ಲು ಮಾಡಬಹುದದಾಗಿದೆ ಎಂದರು.

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರೆ. ಫಾ.ಕ್ಲಿರ್ಫಡ್ ಸೈಮನ್ ಪಿಂಟೊ ಮುಖ್ಯ ಅತಿಥಿಯಾಗಿದ್ದರು.‌ಹೊಸಬೆಳಕು ಒಕ್ಕೂಟದ ಅಧ್ಯಕ್ಷರು ವಿನ್ಸೆಂಟ್ ಲೋಬೋ, ಚರ್ಚ್ ಪಾಲನಾ ಸಮಿತಿ ಆಯೋಗದ ಸಂಚಾಲಕತೋಮಸ್ ಪಿಂಟೊಹಾಗೂ ವಾಳೆಯ ಗುರಿಕಾರರು, ಕೃಷಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದು ಸಹಕರಿಸಿದರು.ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ವಾಲ್ಟರ್ ಮೊನಿಸ್ ಸ್ವಾಗತಿಸಿದರು.ರೆಡ್ಮಿ ಟೀಚರ್ ನಿರೂಪಿಸಿದರು. ಪಾಲನಾ ಸಮಿತಿ ಕಾರ್ಯದರ್ಶಿಗಿಲ್ಬರ್ಟ್ ಪಿಂಟೊ ಧನ್ಯವಾದವಿತ್ತರು.

Related posts

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!