26.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

ಮಡಂತ್ಯಾರು: ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜರವರನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರವರು ಅದ್ಬುತ ಕೆಲಸ ಕಾರ್ಯಗಳ ಮೂಲಕ ಮಡಂತ್ಯಾರು ಸಿಎ ಬ್ಯಾಂಕಿಗೆ ಹೊಸ ಸ್ಪರ್ಶವನ್ನು ಜೋಯೇಲ್ ಮೆಂಡೋನ್ಸ ಅವರ ತಂಡ ಮಾಡಿದೆ. ಕೃಷಿಕರ ಬದುಕಿಗೆ ಶಕ್ತಿಯಾಗುವಂತ ಕಾರ್ಯ ನಡೆಯುತ್ತಿದೆ. ಕಚ್ಚಾ ರಸ್ತೆಯ ಅಭಿವೃದ್ಧಿಗೆ ಸಹಕಾರ ನೀಡಿದ ಕೆಲಸ, ಶೈಕ್ಷಣಿಕ ಸಾಧಕರಿಗೆ ಗೌರವ, ಕೃಷಿ ಸಾಧಕರಿಗೆ ಪ್ರೋತ್ಸಾಹ ನೀಡುವ ಈ ಕೆಲಸ ಅದ್ಬುತ ಕೆಲಸ ನಿರಂತರವಾಗಿ ನಡೆಯಲಿ ಎಂದರು.

ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ,ಆಡಳಿತ ಮಂಡಳಿಯ ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಧನಲಕ್ಷ್ಮೀ, ಅಮಿತಾ ಪ್ರಿಯಾ ಲೋಬೋ, ಸುರೇಶ್ ಎಸ್., ಶಶಿಪ್ರಭಾ, ಮಹಾಬಲ ಕೆ., ಗಣೇಶ್ ಮೂಲ್ಯ, ಗೋಪಾಲಕೃಷ್ಣ ಕೆ., ಕಿಶೋರ್ ಕುಮಾರ್ ಶೆಟ್ಟಿ, ಬಿ., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್, ಸಿಇಒ ಜೋಕಿಂ ಡಿಸೋಜಾ ಹಾಗೂ ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.

Related posts

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!