
ಮಡಂತ್ಯಾರು: ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜರವರನ್ನು ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರವರು ಅದ್ಬುತ ಕೆಲಸ ಕಾರ್ಯಗಳ ಮೂಲಕ ಮಡಂತ್ಯಾರು ಸಿಎ ಬ್ಯಾಂಕಿಗೆ ಹೊಸ ಸ್ಪರ್ಶವನ್ನು ಜೋಯೇಲ್ ಮೆಂಡೋನ್ಸ ಅವರ ತಂಡ ಮಾಡಿದೆ. ಕೃಷಿಕರ ಬದುಕಿಗೆ ಶಕ್ತಿಯಾಗುವಂತ ಕಾರ್ಯ ನಡೆಯುತ್ತಿದೆ. ಕಚ್ಚಾ ರಸ್ತೆಯ ಅಭಿವೃದ್ಧಿಗೆ ಸಹಕಾರ ನೀಡಿದ ಕೆಲಸ, ಶೈಕ್ಷಣಿಕ ಸಾಧಕರಿಗೆ ಗೌರವ, ಕೃಷಿ ಸಾಧಕರಿಗೆ ಪ್ರೋತ್ಸಾಹ ನೀಡುವ ಈ ಕೆಲಸ ಅದ್ಬುತ ಕೆಲಸ ನಿರಂತರವಾಗಿ ನಡೆಯಲಿ ಎಂದರು.
ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೆಲ್ ಮೆಂಡೋನ್ಸಾ,ಆಡಳಿತ ಮಂಡಳಿಯ ಉಪಾಧ್ಯಕ್ಷ ಕಾಂತಪ್ಪ ಗೌಡ, ನಿರ್ದೇಶಕರಾದ ಧನಲಕ್ಷ್ಮೀ, ಅಮಿತಾ ಪ್ರಿಯಾ ಲೋಬೋ, ಸುರೇಶ್ ಎಸ್., ಶಶಿಪ್ರಭಾ, ಮಹಾಬಲ ಕೆ., ಗಣೇಶ್ ಮೂಲ್ಯ, ಗೋಪಾಲಕೃಷ್ಣ ಕೆ., ಕಿಶೋರ್ ಕುಮಾರ್ ಶೆಟ್ಟಿ, ಬಿ., ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್, ಸಿಇಒ ಜೋಕಿಂ ಡಿಸೋಜಾ ಹಾಗೂ ಸಿಬ್ಬಂದಿಗಳು,ಸದಸ್ಯರು ಉಪಸ್ಥಿತರಿದ್ದರು.











