28.9 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ: ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ತುಮಕೂರು, ನೇತ್ರಾವತಿ ವಲಯ, ಬೆಳ್ತಂಗಡಿ ಶಾಖೆಯ ಆತಿಥ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಭಕ್ತಿಭಾವ, ಆತ್ಮೀಯತೆ ಹಾಗೂ ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಶ್ರೀ ವರಮಹಾಲಕ್ಷ್ಮಿ ದೇವಿಯ ಪೂಜೆ, ರಕ್ಷಾಬಂಧನ ಆಚರಣೆ, ಬೌದ್ಧಿಕ ಹಾಗೂ ಪ್ರಸಾದ ವಿತರಣೆ ನಡೆಯಿತು. ಅಳದಂಗಡಿ ಹಾಗೂ ಬೆಳ್ತಂಗಡಿ ಶಾಖೆಯ ಯೋಗ ಬಂಧುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಸಹೋದರತ್ವದ ಭಾವವನ್ನು ಹಂಚಿಕೊಂಡರು.

ರಕ್ಷಾಬಂಧನದ ಮಹತ್ವ ಹಾಗೂ ಭಾರತೀಯ ಸಂಸ್ಕೃತಿಯ ಮೌಲ್ಯಗಳ ಕುರಿತು ಅಳದಂಗಡಿ ಶಾಖೆಯ ಯೋಗ ಬಂಧು ಎಂ.ಕೆ ಪ್ರಸಾದ್ ಇವರು ಅರ್ಥಪೂರ್ಣ ಬೌದ್ಧಿಕ ನೀಡಿದರು. ಅವರ ವಿಚಾರಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪ್ರೇರಣಾದಾಯಕವಾಗಿದ್ದವು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಉಮಾ ರಾವ್ ಅವರು ಉಪಸ್ಥಿತರಿದ್ದರು.

ಸಮಿತಿಯ ಮುಖ್ಯ ಶಿಕ್ಷಕರಾದ ಶ್ರೀಮತಿ ಪ್ರೇಮಲತಾ, ಸಹ ಶಿಕ್ಷಕರಾದ ಸಂತೋಷ್ ಕಾಪಿನಾಡ್ಕ, ಶ್ರೀಮತಿ ಕೋಮಲ ಹಾಗೂ ಶ್ರೀಮತಿ ಶಶಿಕಲಾ, ಶಾಖೆಯ ಸಂಚಾಲಕರಾದ ಶ್ರೀ ವಸಂತ ಕೆಂಬರ್ಜೆ ಸೇರಿದಂತೆ ಹಲವು ಯೋಗ ಬಂಧುಗಳು ಉಪಸ್ಥಿತರಿದ್ದರು. ಯೋಗ ಬಂಧು ಅಶ್ವತ್ಥ್ ಕುಮಾರ್ ಅವರು ಸ್ವಾಗತಿಸಿದರು. ಗೀತಾಪ್ರಕಾಶ್ ಅವರು ವಂದಿಸಿದರು.

Related posts

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಲಾಯಿಲ: ಪಿ.ಎಮ್ ವಿಶ್ವಕರ್ಮ ಯೋಜನೆಯ ಮಾಹಿತಿ ಹಾಗೂ ಆನ್ಲೈನ್ ನೋಂದಾವಣೆ ಕಾರ್ಯಕ್ರಮ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!