
ಬೆಳ್ತಂಗಡಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಆನ್ಲೈನ್ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪ್ರತಿಭೆ ನಿರೀಕ್ಷ ಎನ್. ಪೂಜಾರಿ ದ್ವಿತೀಯ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಇವರು ಮರೋಡಿ ಗ್ರಾಮದ ನವೀನ್ ಸಾಲಿಯಾನ್ ಮತ್ತು ರೂಪ ದಂಪತಿಗಳ ಮಗಳಗಿದ್ದು,ನಾರಾಯಣ ಗುರುಗಳ ಜೀವನ ಮತ್ತು ತತ್ವದರ್ಶಗಳು ಭಾರತೀಯ ಸಮಾಜಕ್ಕೆ ದಿಕ್ಕೂಚಿ’ಎಂಬ ವಿಷಯದ ಬಗ್ಗೆ ನಿರೀಕ್ಷ ಅವರು ಅತ್ಯುತ್ತಮವಾಗಿ ಭಾಷಣ ಮಾಡಿ ಗಮನ ಸೆಳೆದಿದ್ದರು. ಪ್ರಸ್ತುತ ಇವರು ಆಳ್ವಾಸ್ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.
ಇದಕ್ಕೂ ಮೊದಲು ಬೆಳ್ತಂಗಡಿ ಬಿಲ್ಲವ ಸಂಘದಲ್ಲಿ ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಸಾಧಕ ವಿದ್ಯಾರ್ಥಿನಿಗೆ ಬಿಲ್ಲವ ಸಮಾಜದ ಮುಖಂಡರು, ಯುವ ವೇದಿಕೆ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ತಾಲೂಕಿನ ಬಿಲ್ಲವ ಬಾಂಧವರು ಅಭಿನಂದನೆ ಸಲ್ಲಿಸಿದ್ದಾರೆ.











