23.3 C
ಪುತ್ತೂರು, ಬೆಳ್ತಂಗಡಿ
August 30, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

ಬೆಳ್ತಂಗಡಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಆನ್‌ಲೈನ್‌ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪ್ರತಿಭೆ ನಿರೀಕ್ಷ ಎನ್. ಪೂಜಾರಿ ದ್ವಿತೀಯ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಇವರು ಮರೋಡಿ ಗ್ರಾಮದ ನವೀನ್ ಸಾಲಿಯಾನ್ ಮತ್ತು ರೂಪ ದಂಪತಿಗಳ ಮಗಳಗಿದ್ದು,ನಾರಾಯಣ ಗುರುಗಳ ಜೀವನ ಮತ್ತು ತತ್ವದರ್ಶಗಳು ಭಾರತೀಯ ಸಮಾಜಕ್ಕೆ ದಿಕ್ಕೂಚಿ’ಎಂಬ ವಿಷಯದ ಬಗ್ಗೆ ನಿರೀಕ್ಷ ಅವರು ಅತ್ಯುತ್ತಮವಾಗಿ ಭಾಷಣ ಮಾಡಿ ಗಮನ ಸೆಳೆದಿದ್ದರು. ಪ್ರಸ್ತುತ ಇವರು ಆಳ್ವಾಸ್‌ ಸಂಸ್ಥೆಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಇದಕ್ಕೂ ಮೊದಲು ಬೆಳ್ತಂಗಡಿ ಬಿಲ್ಲವ ಸಂಘದಲ್ಲಿ ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಸಾಧಕ ವಿದ್ಯಾರ್ಥಿನಿಗೆ ಬಿಲ್ಲವ ಸಮಾಜದ ಮುಖಂಡರು, ಯುವ ವೇದಿಕೆ ಪದಾಧಿಕಾರಿಗಳು ಮತ್ತು ಬೆಳ್ತಂಗಡಿ ತಾಲೂಕಿನ ಬಿಲ್ಲವ ಬಾಂಧವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ಉಜಿರೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲಾಕ್ಮಿ ಕಂಪನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ ಆಡಳಿತ ಮಂಡಳಿ ರಚನೆ: ಅಧ್ಯಕ್ಷರಾಗಿ ಯುವ ನಾಯಕ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya
error: Content is protected !!