23.3 C
ಪುತ್ತೂರು, ಬೆಳ್ತಂಗಡಿ
August 30, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

ಗುರುವಾಯನಕೆರೆ: ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಲಯದಲ್ಲಿ ಆ.29ರಂದು ನಡೆದ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ವರ್ಣಿಕ ಎಚ್. ಅವರು ಅಂಡರ್-60 ಕೆ.ಜಿ. ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾಗಿದ್ದಾರೆ.

ಈ ಸಾಧನೆಯೊಂದಿಗೆ ಮಧ್ಯಪ್ರದೇಶದ ದಿವಾಸ್ ಸಿಟಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ. ಮಂಡ್ಯದ ಹರೀಶ್ ಹಾಗೂ ಸವಿತಾ ದಂಪತಿಯ ಪುತ್ರಿಯಾಗಿರುವ ವರ್ಣಿಕ ಅವರು ಸ್ಟಾನ್ಲಿ ಪಿಂಟೋ ಅವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Related posts

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya
error: Content is protected !!