29.8 C
ಪುತ್ತೂರು, ಬೆಳ್ತಂಗಡಿ
August 30, 2026
ಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು ಎಕ್ಸೆಲ್ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ-ಕ್ರೀಡೆ ದೈಹಿಕ–ಮಾನಸಿಕ ಕ್ಷಮತೆ ಹೆಚ್ಚಿಸುತ್ತದೆ: ಸುಮಂತ್ ಕುಮಾರ್ ಜೈನ್

ವೇಣೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯೋದಯ ಕ್ಯಾಂಪಸ್ ವೇಣೂರು ಇದರ ಸಹಯೋಗದಲ್ಲಿ ನಿಟ್ಟಡೆ, ಬಜಿರೆ ಮತ್ತು ಪಡ್ಡಂದಡ್ಕ ವಲಯ ಮಟ್ಟದ ಬಾಲಕ–ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಆ.29ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ರಾಜಶ್ರೀ ಬಿ. ಉದ್ಘಾಟಿಸಿ‌ ಮಾತನಾಡಿದ ಅವರು, ಎಕ್ಸೆಲ್ ಸಂಸ್ಥೆಯು ಈ ಬಾರಿ ವಲಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಎರಡೆರಡು ಕ್ರೀಡಾ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಇಲಾಖೆಯ ವತಿಯಿಂದ ಸಂಸ್ಥೆಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವುದರ ಜತೆಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ತಂಡದ ಮನೋಭಾವ ಬೆಳೆಸುತ್ತದೆ. ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಪ್ರೋತ್ಸಾಹ ನೀಡಬೇಕು ಎಂದರು.

ವಲಯ ಸಂಘಟನಾ ಅಧಿಕಾರಿ ಆರತಿ ಪ್ರಸ್ತಾವನೆಗೈದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಮುಖ್ಯ ಶಿಕ್ಷಕ ಶಾಂತಿರಾಜ್ ಜೈನ್ ಸ್ವಾಗತಿಸಿದರು. ಬೆಳ್ತಂಗಡಿ ತಾಲೂಕು ಇ.ಆರ್.ಟಿ.ಇ. ಜಗದೀಶ್ ಬಿ., ನಾರಾವಿ ವಲಯ ಸಂಘಟನಾ ಅಧಿಕಾರಿ ಲೋಕಯ್ಯ ಎನ್., ಅಳದಂಗಡಿಯ ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ರಾಜ್ಯ ಮಟ್ಟದ ವಾಲಿಬಾಲ್ ತೀರ್ಪುಗಾರ ಕೆವನ್ ಉಪಸ್ಥಿತರಿದ್ದರು.

ಕನ್ನಡ ಶಿಕ್ಷಕಿ ಅಕ್ಷತ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಶಿಕ್ಷಕ ಅಶೋಕ್ ಧನ್ಯವಾದವಿತ್ತರು. ವಿದ್ಯಾರ್ಥಿಗಳಾದ ಸಾನ್ವಿ, ಪ್ರಣಮ್ಯ ಎಂ.ಎಸ್., ಹರ್ಷಿತಾ, ಅನ್ವಿತಾ ಹಾಗೂ ರಶ್ಮಿತಾ ದೇವಾಡಿಗ ಪ್ರಾರ್ಥಿಸಿದರು.

ಬಾಲಕಿಯರ ವಿಭಾಗದಲ್ಲಿ ಕಾಶಿಪಟ್ನ ಹಿರಿಯ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ, ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ ನವಚೇತನ ಆಂಗ್ಲ ಮಾಧ್ಯಮ ಶಾಲೆ ವೇಣೂರು ಪ್ರಥಮ ಹಾಗೂ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ದ್ವಿತೀಯ ಸ್ಥಾನ ಗಳಿಸಿತು.

ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಶಿಕ್ಷಣ ಸಂಯೋಜಕಿ ಕಾವ್ಯಶ್ರೀ ಎನ್. ವಿಜೇತರನ್ನು ಅಭಿನಂದಿಸಿದರು. ಸಮಾಜ ವಿಜ್ಞಾನ ಶಿಕ್ಷಕ ದಾಮೋದರ್ ಸಮಗ್ರ ನಿರ್ವಹಣೆ ಮಾಡಿದರು.ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಸಹಕರಿಸಿದರು.

Related posts

ಯಕ್ಷ ಭಾರತಿಯಿಂದ ಯಕ್ಷಗಾನ ತಾಳಮದ್ದಳೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!