ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ಬಾಲಕ ಬೆಳ್ತಂಗಡಿ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮನೆಯ ಮೇಲ್ಚಾವಣಿಯ ಕೊಣೆಯಲ್ಲಿ ವೇಲ್ ನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ-ತಾಯಿ ಮತ್ತು ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ. ಧರ್ಮಸ್ಥಳ ಪೋಲಿಸ್ ಠಾಣೆಯ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.











