28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಣೆ: ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ರವರಿಂದ ವಸ್ತ್ರ ವಿತರಣೆ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮೋಹನ್ ಚೌದ್ರಿ ಮಾಲಕರು ದುರ್ಗಾ ಟೆಕ್ಸ್ ಟೈಲ್ಸ್ ಉಜಿರೆ ಹಾಗೂ ರತನ್ ಸಿಂಗ್ ಪೂಜಾ ಏಜೆನ್ಸಿ ಉಜಿರೆ, ಸುಖರಾಂ ಪಟೇಲ್, ಮಾಲಕರು ರಾಜಾರಾಮ್ ಶೋರೂಮ್ ಉಜಿರೆ, ಇವರು ಭೇಟಿ ನೀಡಿ ವಿಶೇಷ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸಿಕೊಂಡರು.

ಈ ಸಂದರ್ಭದಲ್ಲಿ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿಶೇಷ ಮಕ್ಕಳು ಹಾಜರಿದ್ದರು. ರಕ್ಷಾ ಬಂಧನ ಹಬ್ಬದ ಪ್ರಯುಕ್ತ ದುರ್ಗಾ ಟೆಕ್ಸ್ ಟೈಲ್ಸ್ ಮಾಲಕರಾದ ಮೋಹನ್ ಚೌಧರಿ ಸಾನಿಧ್ಯ ಕೇಂದ್ರದ ವಿಶೇಷ ಮಕ್ಕಳಿಗೆ ಹೊಸ ಹೊಸ ವಿನ್ಯಾಸದ ವಸ್ತ್ರಗಳನ್ನು ಹಾಗೂ ವಿಶೇಷ ಶಿಕ್ಷಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿರುತ್ತಾರೆ.

ದುರ್ಗಾ ಟೆಕ್ಸ್ಟೈಲ್ಸ್ ಮಾಲಕರಾದ ಮೋಹನ್ ಚೌದರಿ ಮಾತನಾಡಿ ದೇವರ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸಿಕೊಂಡಿದ್ದು ತುಂಬಾ ಸಂತೋಷ ಕೊಟ್ಟಿದೆ. ಇಲ್ಲಿನ ಸಿಬ್ಬಂದಿಗಳ ಸೇವೆ ಅತ್ಯಂತ ಮಹತ್ವಪೂರ್ಣವಾದದ್ದು ಹಾಗೂ ಹೆಮ್ಮೆ ಪಡುವಂಥದ್ದು. ನಮ್ಮ ಸಹಕಾರ ಪ್ರೋತ್ಸಾಹ ಸದಾ ಈ ಸಂಸ್ಥೆಯ ಮೇಲೆ ಇರಲಿದೆ. ಹಾಗೂ ಎಲ್ಲರಿಗೂ ರಕ್ಷಾ ಬಂಧನ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು.

Related posts

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya
error: Content is protected !!