28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಬೆಳ್ತಂಗಡಿ ತಾಲೂಕಿನ ಬಾಧಿತವಾಗುವ ಗ್ರಾಮಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘ ಬೆಳ್ತಂಗಡಿ ತಾಲೂಕು ಇದರ ವತಿಯಿದ ಆ.31ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದಿಂದ ತಾಲೂಕು ಕಛೇರಿ ವರೆಗೆ ಶಾಂತಿಯುತ ಮೆರವಣಿಗೆ ನಡೆದು ಬಳಿಕ ತಹಶೀಲ್ದಾರರಿಗೆ ಮನವಿ ನೀಡಲಾಯಿತು.

ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಮಾತನಾಡಿ, ಶತಮಾನಗಳಿಂದ ವಂಶ ಪಾರಂಪರಿಕವಾಗಿ ಕೃಷಿಯನ್ನೆ ಮೂಲ ಆದಾಯವಾಗಿ ಸಂಸಾರ ಸಮೇತವಾಗಿ ವಾಸವಾಗಿರುವವರು ರೈತ ವರ್ಗದವರು. ಸರಕಾರ ನಮ್ಮ ಒಪ್ಪಿಗೆ ಪಡೆಯದೆ, ಮನದಟ್ಟು ಮಾಡದೆ ಏಕಾಏಕಿ ಕಾನೂನು ಜಾರಿ ಮಾಡಿರುವುದು ತಪ್ಪು. ಕಸ್ತೂರಿ ರಂಗನ್ 2014ರ ವರದಿಯನ್ನು ಪುನರ್ ಪರಿಶೀಲನೆ ಮಾಡುವ ತನಕ ಜಾರಿಗೊಳಿಸಲೇ ಬಾರದು ಎಂದು ಒತ್ತಾಯಿಸಿದರು.

ಕಸ್ತೂರಿ ರಂಗನ್ 2014ರ ವರದಿಯನ್ನು ಪುನರ್ ಪರಿಶೀಲನೆ ಮಾಡುವ ಕುರಿತಾತ ಮನವಿಯ ಜೊತೆಗೆ ರೈತರಿಗೆ ಕೋವಿ ಪರವಾನಿಗೆ ಮಂಜೂರು ಮಾಡುವ ಕುರಿತು, ಹಾಗೂ ಕಾಡು ಪ್ರಾಣಿಗಳ ಹಾವಳಿಗಳಿಂದ ರೈತರ ಜೀವಹಾನಿ, ಬೆಳೆನಾಶವಾಗುತ್ತಿದ್ದು, ರಾಜ್ಯ ಸರಕಾರದಿಂದ ರೈತರಿಗೆ ಸೂಕ್ತರಕ್ಷಣೆಗಾಗಿ ಮತ್ತು ಪರಿಹಾರಗಳ ವ್ಯವಸ್ಥೆ ನೀಡುವಂತೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಅಂಬುಜಾಕ್ಷ, ರಾಮ್‌ಪ್ರಸಾದ್, ಶಾಂಭವಿ, ಎಸ್‌ಆರ್ ಭಾಸ್ಕರ್ ಸಾಲಿಯಾನ್, ಜಯಣ್ಣ, ಶಿವಣ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಅಂತರ್ ಪಾಲಿಟೆಕ್ನಿಕ್ ತಾಂತ್ರಿಕ ಪ್ರದರ್ಶನ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!