28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಯಾ ವಿಶೇಷ ಶಾಲೆಯಲ್ಲಿ ಸಿಬ್ಬಂದಿ ಸಭೆ: ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಶಿಸ್ತಿಗೆ ಹೆಚ್ಚಿನ ಆದ್ಯತೆ

ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಯ ಸಭೆ ನಡೆಯಿತು. ಸಭೆಯಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ಮಕ್ಕಳ ಆರೈಕೆ, ಸುರಕ್ಷತೆ, ಚಿಕಿತ್ಸಾ ಸೇವೆಗಳು ಹಾಗೂ ಶಾಲಾ ಆಡಳಿತಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಲಾಯಿತು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಚಿಕಿತ್ಸಾ ಸೇವೆಗಳನ್ನು ಸಮರ್ಪಕವಾಗಿ ಒದಗಿಸುವುದು, ಶಿಕ್ಷಕರು ತಮ್ಮ ತರಗತಿಯ ಮಕ್ಕಳ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ರಜೆಯ ಸಂದರ್ಭದಲ್ಲಿ ಪರ್ಯಾಯ ಶಿಕ್ಷಕರಿಗೆ ಜವಾಬ್ದಾರಿ ಹಸ್ತಾಂತರಿಸುವ ಕುರಿತು ಸೂಚಿಸಲಾಯಿತು.

ಊಟದ ಸಮಯದಲ್ಲಿ ಮಕ್ಕಳ ಮೇಲೆ ಸೂಕ್ತ ನಿಗಾ ವಹಿಸುವುದು, ಮಕ್ಕಳ ಸ್ವಚ್ಛತೆ ಹಾಗೂ ವೈಯಕ್ತಿಕ ಆರೈಕೆಗೆ ಗಮನ ನೀಡುವುದು ಮತ್ತು ಶಾಲಾ ಬಸ್‌ನಲ್ಲಿ ಮಕ್ಕಳನ್ನು ಸುರಕ್ಷಿತವಾಗಿ ಕರೆತರುವುದು–ಕಳುಹಿಸುವುದರ ಬಗ್ಗೆ ಸಿಬ್ಬಂದಿಗೆ ಜವಾಬ್ದಾರಿಗಳನ್ನು ನೆನಪಿಸಲಾಯಿತು.

ಪ್ರತಿದಿನ ಸ್ಟಾಫ್ ಮೀಟಿಂಗ್/ಸ್ಟಾಫ್ ಚರ್ಚೆ ನಡೆಸಿ, ಮಕ್ಕಳ ಶೈಕ್ಷಣಿಕ ಪ್ರಗತಿ, ವರ್ತನೆ ಹಾಗೂ ಅಗತ್ಯತೆಗಳ ಕುರಿತು ಪರಸ್ಪರ ಚರ್ಚಿಸುವಂತೆ ತಿಳಿಸಲಾಯಿತು. ಮಕ್ಕಳಿಗೆ ನೀಡಲಾಗುವ ಫಿಸಿಯೋಥೆರಪಿ ಹಾಗೂ ಇತರ ಚಿಕಿತ್ಸಾ ಸೇವೆಗಳ ವೇಳಾಪಟ್ಟಿಯನ್ನು ಸರಿಯಾಗಿ ನಿರ್ವಹಿಸುವುದು ಮತ್ತು ಚಿಕಿತ್ಸಾ ಚಟುವಟಿಕೆಗಳ ಮೇಲ್ವಿಚಾರಣೆ ಮಾಡುವ ಬಗ್ಗೆಯೂ ಚರ್ಚೆ ನಡೆಯಿತು.

ಮಕ್ಕಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಅಥವಾ ವಿಶೇಷ ಗಮನ ಅಗತ್ಯವಿರುವ ವಿಚಾರಗಳನ್ನು ತಕ್ಷಣವೇ ಮುಖ್ಯಸ್ಥರ ಗಮನಕ್ಕೆ ತರುವಂತೆ ಸೂಚಿಸಲಾಯಿತು. ಪೋಷಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಮಕ್ಕಳ ಪ್ರಗತಿ ಮತ್ತು ಅಗತ್ಯತೆಗಳ ಕುರಿತು ನಿರಂತರವಾಗಿ ಸಹಕರಿಸುವಂತೆ ಶಿಕ್ಷಕರಿಗೆ ತಿಳಿಸಲಾಯಿತು.

ಸಭೆಯಲ್ಲಿ ಪ್ರತಿಯೊಬ್ಬ ಸಿಬ್ಬಂದಿಯ ಜವಾಬ್ದಾರಿಯುತ ಸಹಕಾರವೇ ವಿಶೇಷ ಮಕ್ಕಳ ಸಮಗ್ರ ಅಭಿವೃದ್ಧಿಗೆ ಪ್ರಮುಖ ಆಧಾರ ಎಂಬ ಆಶಯದೊಂದಿಗೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ನಿರ್ಧಾರ ಕೈಗೊಂಡರು.

Related posts

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya
error: Content is protected !!