28.6 C
ಪುತ್ತೂರು, ಬೆಳ್ತಂಗಡಿ
August 31, 2026
Uncategorized

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.
ಈ ಅಪಾಯಕಾರಿ ಗುಂಡಿಯನ್ನು ಮುಚ್ಚುವಂತೆ ಮತ್ತು ದುರಸ್ತಿಪಡಿಸುವ ಬಗ್ಗೆ ತಾಲೂಕು ಪಂಚಾಯತ್ ಕೆಡಿಪಿ ಸದಸ್ಯ ಹಾಗೂ ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಡಿ. ಜಗದೀಶ್‌ ಅವರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಆಡಳಿತಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು. ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ಜಗದೀಶ್ ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಅನಿಸಿಕೆ ವ್ಯಕ್ತಪಡಿಸಿ ದ್ದಾರೆ.

Related posts

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ಚಾರ್ಮಾಡಿ ಮಠದ ಮಜಲು ಅನಂತ ರಾವ್ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆಗಳು: ಕೃಷಿ ಹಾನಿ

Suddi Udaya

ಉಪ್ಪಿನಂಗಡಿ ಕಲ್ಲೇರಿ ಬಳ್ಳಮಂಜ ಮಡಂತ್ಯಾರ್-ಧರ್ಮಸ್ಥಳ ಮತ್ತು ಮಂಗಳೂರು ಮಾರ್ಗವಾಗಿ ಸರ್ಕಾರಿ ಬಸ್ ಪ್ರಾರಂಭಿಸುವಂತೆ ಸಾರಿಗೆ ಸಚಿವರಿಗೆ ಮನವಿ

Suddi Udaya
error: Content is protected !!