28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: 36 ವರ್ಷಗಳ ಸಾರ್ಥಕ ಸೇವೆಯ ಬಳಿಕ ಶಿಕ್ಷಕಿ ಜಯಂತಿ ಟಿ. ವಯೋನಿವೃತ್ತಿ

ಮುಂಡಾಜೆ: ಶತಾಬ್ದಿ ವಿದ್ಯಾಲಯ ಸಮಿತಿಯ ಅಧೀನದಲ್ಲಿರುವ ಮುಂಡಾಜೆ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 36 ವರ್ಷಗಳಿಂದ ಶಿಕ್ಷಕಿಯಾಗಿ ಹಾಗೂ ಮುಖ್ಯ ಶಿಕ್ಷಕಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಜಯಂತಿ ಟಿ. ಅವರು ಆ.31ರಂದು ವಯೋನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ಶಾಲೆಯ ವತಿಯಿಂದ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಜಯಂತಿ ಟಿ. ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುವುದರ ಜತೆಗೆ ಮುಖ್ಯ ಶಿಕ್ಷಕಿಯಾಗಿ ಶಾಲೆಯ ಆಡಳಿತಾತ್ಮಕ ಜವಾಬ್ದಾರಿಯನ್ನೂ ಸಮರ್ಥವಾಗಿ ನಿರ್ವಹಿಸಿ, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಸನ್ಮಾನ ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ, ಉಪಾಧ್ಯಕ್ಷೆ ರೂಪಲೇಖ, ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ, ಶತಾಬ್ದಿ ವಿದ್ಯಾಲಯ ಸಮಿತಿಯ ಸಂಚಾಲಕ ನಾರಾಯಣ ಫಡ್ಕೆ, ಸದಸ್ಯ ವೆಂಕಟೇಶ್ವರ ಭಟ್ ಕಜೆ, ನಾರಾಯಣಗೌಡ , ಪ್ರಭಾರ ಮುಖ್ಯ ಶಿಕ್ಷಕ ಸುರೇಶ್ ಎಂ.ಟಿ. ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವ ನಾಗರಾಜ ಶೆಟ್ಟಿ ಭೇಟಿ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!