28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೊರಸಂಪನ್ಮೂಲ ನೌಕರರಿಂದ ರಕ್ಷಿತ್ ಶಿವರಾಂ ರವರಿಗೆ ಮನವಿ

ಬೆಳ್ತಂಗಡಿ: ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರ ಕನಿಷ್ಠ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಕೆಪಿಸಿಸಿ ಕರ್ನಾಟಕ ರಾಜ್ಯ ಕಾರ್ಯದಲ್ಲಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ರಾಜ್ಯದ ಕಾರ್ಮಿಕ ಇಲಾಖೆಯು ಕಾರ್ಮಿಕರ ಕನಿಷ್ಠ ವೇತನ ಕಾಯ್ದೆ 1948 ರ ಕಾಯಿದೆಯಡಿ ಕನಿಷ್ಠ ವೇತನ ಜಾರಿಗೊಳಿಸಲು ಆದೇಶಿಸಲಾಗಿತ್ತು. ಆದರಂತೆ ಜೂನ್ , ಜುಲೈ ತಿಂಗಳ ವೇತನ ಕೂಡ ಪಾವತಿಯಾಗಿತ್ತು. ಆದರೆ ಇದೀಗ ಏಕಾಏಕಿ ರಾಜ್ಯದ ಆರ್ಥಿಕ ಇಲಾಖೆ ಕನಿಷ್ಠ ವೇತನ ಪರಿಷ್ಕರಣೆಯನ್ನು ತಡೆಹಿಡಿಯುವ ಮೂಲಕ ಹೊರಸಂಪನ್ಮಲ ನೌಕರರಿಗೆ ಅನ್ಯಾಯ ಎಸಗಲಾಗಿದೆ‌. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದು , ತಡೆ ಹಿಡಿದಿರುವ ಕನಿಷ್ಠ ವೇತನವನ್ನು ಮರು ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಉಪಸ್ಥಿತರಿದ್ದರು.

Related posts

ಸೆ. 9: ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಿಂದ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya
error: Content is protected !!