29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ, ಸಾಧನಾ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ

ಬೆಳ್ತಂಗಡಿ: ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸನ್ಮಾನ ಕಾರ್ಯಕ್ರಮ ಸಾಧನಾ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರವು ತಾ.ಮ.ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ ಹೆಚ್.ಎಲ್. ಅಧ್ಯಕ್ಷತೆಯಲ್ಲಿ ಆ.30ರಂದು ಸರಕಾರಿ ನೌಕರರ ಸಂಘ, ಬೆಳ್ತಂಗಡಿ ಇದರ ‘ಏಕತಾ ಸೌಧ’ ಸಭಾಭವನದಲ್ಲಿ ಜರುಗಿತು.

ಮುಂಡಾಜೆ ಸಿ.ಎ ಬ್ಯಾಂಕ್ ನಿರ್ದೇಶಕ ಚೆನ್ನಕೇಶವ ಅರಸಮಜಲು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಭೆಯಲ್ಲಿ ಶ್ರೀ ಮಹಮ್ಮಾಯಿ ದರ್ಶನ ಪಾತ್ರಿಗಳಾದ ಬೊಮ್ಮಯ್ಯ ನಾಯ್ಕ, ರೋಹಿತ್ ನಾಯ್ಕ, ಬೆಳ್ತಂಗಡಿ ಪೋಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ ಕುಶಾಲಪ್ಪ ನಾಯ್ಕ, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮೋಹಿನಿರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕೆಎಸ್‌ಆರ್‌ಟಿಸಿ, ಪುತ್ತೂರು ವಿಭಾಗದ ಭದ್ರತಾ ಅಧೀಕ್ಷಕ ಮಧುಸೂಧನ ನಾಯ್ಕ, ನಿವೃತ್ತ ಶಿಕ್ಷಕ ಕುಮಾರಯ್ಯ ನಾಯ್ಕ, ತಾ.ಮ.ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ಉಮೇಶ್ ನಾಯ್ಕ ಕೇಳಡ್ಕ, ಆದಾಯ ತೆರಿಗೆ ಇಲಾಖೆಯ ನಿವೃತ್ತ ಆಯುಕ್ತ ಕೆ.ಎ. ಚಂದ್ರಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್ ದೇವಪ್ಪ ನಾಯ್ಕ, ನ್ಯೂ ಇಂಡಿಯಾ ಇನ್ಸೂರೆನ್ಸ್ ಕಂಪೆನಿ ನಿವೃತ್ತ ಅಧಿಕಾರಿ ಪಿ. ಕುಮಾರಯ್ಯ ನಾಯ್ಕ, ಕೃಷಿ ಇಲಾಖೆಯ ನಿವೃತ್ತ ನಿರ್ದೇಶಕ ಡಾ. ಎ. ಪದ್ಮಯ್ಯ ನಾಯ್ಕ, ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್., ಮಂಜುನಾಥ ನಾಯ್ಕ, ಅಬಕಾರಿ ಇಲಾಖೆಯ ಉಪ ಅಧೀಕ್ಷಕ ಸೌಮ್ಯಲತಾ ಎನ್., ಉಪಸ್ಥಿತರಿದ್ದರು.

ಸಭೆಯಲ್ಲಿ ತಾ.ಮ. ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷರುಗಳಾದ ವಸಂತ ನಾಯ್ಕ, ಪ್ರಭಾಕರ ನಾಯ್ಕ, ಪ್ರಧಾನ ಕಾರ್ಯದರ್ಶಿ ತಾರನಾಥ ನಾಯ್ಕ, ಕಾರ್ಯದರ್ಶಿಗಳಾದ ಸುರೇಶ್ ಹೆಚ್.ಎಲ್. ಪವಿತ್ರಾ ಲೋಕೇಶ್, ಕೋಶಾಧಿಕಾರಿ ಹರೀಶ್ ಪೆರಾಜೆ, ಕಾರ್ಯಕಾರಿ ಸಮಿತಿ ಸದಸ್ಯರು, ಗೌರವ ಸಲಹೆಗಾರರು, ತಾಲೂಕಿನ ಎಲ್ಲಾ ಗ್ರಾಮ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ತಾಲೂಕಿನ ಎಲ್ಲಾ ಸ್ವಜಾತಿ ಬಾಂಧವರು ಭಾಗವಹಿಸಿದರು.

Related posts

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya
error: Content is protected !!