28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ರೂ.9.02 ಲಕ್ಷ ನಿವ್ವಳ ಲಾಭ: ಸದಸ್ಯರಿಗೆ ಶೇ.65 ಬೋನಸ್‌, ಶೇ.24 ಡಿವಿಡೆಂಟ್‌ ಘೋಷಣೆ

ಬಳಂಜ: ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವು 1,500 ಲೀಟರ್ ಹಾಲು ಸಂಗ್ರಹಿಸಿ ಒಕ್ಕೂಟಕ್ಕೆ ಮಾರಾಟ ಮಾಡುವ ಮೂಲಕ ರೂ.19,43,629.39 ಒಟ್ಟು ವ್ಯವಹಾರ ನಡೆಸಿದ್ದು, ರೂ.9,02,358.70 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷೆ ಪುಷ್ಪಾ ತಿಳಿಸಿದರು.

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಆ.24ರಂದು ನಡೆದ ಸಂಘದ ವಾರ್ಷಿಕ ಸಭೆಯಲ್ಲಿ ಅವರು ಮಾತನಾಡಿದರು.

ಸದಸ್ಯರು ಗುಣಮಟ್ಟದ ಹಾಲು ಪೂರೈಕೆ ಮಾಡುವುದರ ಜೊತೆಗೆ ಸಂಘದ ಪಶು ಆಹಾರವನ್ನು ಖರೀದಿಸುವ ಮೂಲಕ ಸಂಘದ ಲಾಭದಾಯಕ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ. ಸಿಬ್ಬಂದಿಗಳ ಪೂರ್ಣ ಸಹಕಾರದಿಂದ ಸಂಘ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸದಸ್ಯರಿಗೆ ಶೇ.65 ಬೋನಸ್‌ ಹಾಗೂ ಶೇ.24 ಡಿವಿಡೆಂಟ್‌ ಘೋಷಿಸಲಾಯಿತು.

ದ.ಕ. ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ರಾಜೇಶ್ ಪಿ. ಕಾಮತ್ ಮಾತನಾಡಿ, ಸರಕಾರ ಹಾಗೂ ಹಾಲು ಒಕ್ಕೂಟದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಗುಣಮಟ್ಟದ ಹಾಲು ಉತ್ಪಾದಿಸಿ ಹೆಚ್ಚಿನ ಲಾಭ ಪಡೆಯುವಂತೆ ಹಾಗೂ ನಂದಿನಿ ಸಮತೋಲನ ಪಶು ಆಹಾರ, ಲವಣ ಮಿಶ್ರಣ ಮತ್ತು ಸಂವೃದ್ಧಿ ಬಳಕೆಯಿಂದ ಹೈನುಗಾರಿಕೆಯಲ್ಲಿ ಹೆಚ್ಚಿನ ಆದಾಯ ಗಳಿಸುವ ಕುರಿತು ತಿಳಿಸಿದರು.

ಸಂಘದ ಉಪಾಧ್ಯಕ್ಷೆ ಪ್ರಮೀಳಾ, ನಿರ್ದೇಶಕರಾದ ಮಾಲಿನಿ, ಮುಕ್ತಾ, ಉಷಾ, ಅರುಣ ಹೆಗ್ಡೆ, ಜಯಶ್ರೀ, ಚಂದ್ರಾವತಿ, ನಂದಿನಿ, ಬೇಬಿ ಹಾಗೂ ಹಾಲು ಪರೀಕ್ಷಕಿ ರೇಶ್ಮಾ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ವರದಿ ವಾಚಿಸಿದರು. ಕೀರ್ತಿ ಪ್ರಾರ್ಥಿಸಿ ಸ್ವಾಗತಿಸಿದರು. ನಿರ್ದೇಶಕಿ ಜಯಶ್ರೀ ವಂದಿಸಿದರು. ಚಂದ್ರಾವತಿ ಕೆ. ಮತ್ತು ನಂದಿನಿ ಸುರೇಶ್ ನಿರೂಪಿಸಿದರು.


ಸನ್ಮಾನ:
2008ರಿಂದ ನಿರಂತರವಾಗಿ ಸಂಘದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿರುವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಹಾಗೂ ಸಂಘದ ಅಭಿವೃದ್ಧಿಗೆ ಸಹಕರಿಸುತ್ತಿರುವ ಹಾಲು ಪರೀಕ್ಷಕಿ ರೇಷ್ಮಾ ಅವರನ್ನು ಸನ್ಮಾನಿಸಲಾಯಿತು. ಅತೀ ಹೆಚ್ಚು ಹಾಲು ಪೂರೈಸಿದ ನಾಲ್ವರು ಹೈನುಗಾರರನ್ನು ಗೌರವಿಸಲಾಯಿತು. ಅಲ್ಲದೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಲಾಯಿತು.

Related posts

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!