28.6 C
ಪುತ್ತೂರು, ಬೆಳ್ತಂಗಡಿ
August 31, 2026
Uncategorized

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ : ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ- ಹೊಂಡವನ್ನು ಮುಚ್ಚುವಂತೆ ಡಿ. ಜಗದೀಶ್‌ ಅವರಿಂದ ಪಟ್ಟಣ ಪಂಚಾಯತ್‌ಗೆ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯ ನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ.
ಈ ಅಪಾಯಕಾರಿ ಗುಂಡಿಯನ್ನು ಮುಚ್ಚುವಂತೆ ಮತ್ತು ದುರಸ್ತಿಪಡಿಸುವ ಬಗ್ಗೆ ತಾಲೂಕು ಪಂಚಾಯತ್ ಕೆಡಿಪಿ ಸದಸ್ಯ ಹಾಗೂ ಮಾಜಿ ಪಟ್ಟಣ ಪಂಚಾಯತ್ ಸದಸ್ಯ ಡಿ. ಜಗದೀಶ್‌ ಅವರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಆಡಳಿತಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇದೇ ರಸ್ತೆಯ ಇನ್ನೊಂದು ಬದಿ ಕಳೆದ ಎರಡು ತಿಂಗಳ ಹಿಂದೆ ಕುಸಿದಿದ್ದು, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬಳಿಕ ಪಟ್ಟಣ ಪಂಚಾಯತ್ ರಸ್ತೆಬದಿ ತಡೆಗೋಡೆ ನಿರ್ಮಿಸಿತು. ಆದರೆ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸದೆವಿರುವುದು ಅಪಾಯ ಉಂಟು ಮಾಡಿದೆ. ಈ ರಸ್ತೆಯಲ್ಲಿ ವಿದ್ಯಾರ್ಥಿಗಳು, ಮಕ್ಕಳು, ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದು ಶೀಘ್ರವೇ ಕ್ರಮ ವಹಿಸುವಂತೆ ಜಗದೀಶ್ ಆಗ್ರಹಿಸಿದ್ದಾರೆ. ಪಟ್ಟಣ ಪಂಚಾಯತ್ ಅಂದೇ ಇನ್ನೊಂದು ಬದಿಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಸಾರ್ವಜನಿಕರು ಅನಿಸಿಕೆ ವ್ಯಕ್ತಪಡಿಸಿ ದ್ದಾರೆ.

Related posts

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya
error: Content is protected !!