28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಂವಿಧಾನ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ

ಬೆಳ್ತಂಗಡಿ : ಸಂವಿಧಾನ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷ ಸುಂದರ್ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಉದ್ದೇಶ ಹಾಗೂ ಮೀಸಲಾತಿ ಕುರಿತಾದ ಸಂಕ್ಷಿಪ್ತ ಮಾಹಿತಿಯನ್ನು ಶಿಕ್ಷಕ ಸುಕೇಶ್ ಕೆ ಮಾಲಾಡಿ ಹೇಳಿದರು. ಯುವ ಮುಖಂಡರುಗಳು ಅಭಿಪ್ರಾಯ, ಪ್ರಶ್ನೆ, ಹಾಗೂ ಸಲಹೆ ಸೂಚನೆಗಳನ್ನು ನೀಡಿದರು. ಸಂವಿಧಾನ ರಕ್ಷಣಾ ಸಮಿತಿಯ ಗೌರವ ಸಲಹೆಗಾರರಾಗಿರುವ ಶೇಖರ್ ಕುಕ್ಕೇಡಿ ಇವರು ಸಂವಾದದೊಂದಿಗೆ ಉತ್ತರಿಸಿದರು.

ವೇದಿಕೆಯಲ್ಲಿ ಸಮಿತಿಯ ಕೋಶಾಧಿಕಾರಿ ಶಿವಾನಂದ ಪಡಂಗಡಿ, ಉಪಾಧ್ಯಕ್ಷ ವಿಜಯ್ ಕುಮಾರ್ ಬಜಿರೆ, ಗೌರವ ಸಲಹೆಗಾರರಾದ ಓಬಯ್ಯ ಆರಂಬೋಡಿ, ಶೇಖರ್ ವಿ ಧರ್ಮಸ್ಥಳ, ಬಾಬಿ ಮಾಲಾಡಿ, ನಾರಾಯಣ ಪುದುವೆಟ್ಟು, ಆದಿ ದ್ರಾವಿಡ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ದಿನೇಶ್ ಕೊಕ್ಕಡ, ಯುವವಕೀಲೆ ಸವಿತಾ ಇವರುಗಳು ಅನಿಸಿಕೆ ವ್ಯಕ್ತಪಡಿಸಿದರು. ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿಗಳನ್ನು ನೇಮಕ ಮಾಡಲಾಯಿತು. ‌

ಸುಶ್ಮೀತಾ ಮಾಲಾಡಿ ಸ್ವಾಗತಿಸಿ, ಮಾನ್ಯ ಉಜಿರೆ ವಂದಿಸಿದರು. ವಿನಯ್ ಕುಮಾರ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿ.ಸಿ ಟ್ರಸ್ಟ್ ಸಿಡ್ಬಿ ಪ್ರಯಾಸ ಸ್ವ ಉದ್ಯೋಗ ಕ್ಕೆ 1ಕೋಟಿ ಪ್ರಗತಿ ನಿಧಿ ಮಜೂರಾತಿ ವಿತರಣೆ

Suddi Udaya
error: Content is protected !!