29.3 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಜನಾ ಪರಿಷತ್ತಿನ ವತಿಯಿಂದ ನಂದಗೋಕುಲ ಗೋಶಾಲೆಗೆ ಮೇವು ಹಾಗೂ ಹಿಂಡಿ ಸಮರ್ಪಣೆ

ಬೆಳ್ತಂಗಡಿ : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ ಹಾಗೂ ತಾಲೂಕಿನ ವಲಯ ಸಮಿತಿಗಳ ಪದಾಧಿಕಾರಿಗಳ ಸಹಕಾರದೊಂದಿಗೆ ಕಳೆಂಜ ಬಂಡೇರಿ ನಂದಗೋಕುಲ ಗೋಶಾಲೆಗೆ ಸುಮಾರು ಮೂರು ಪಿಕಪ್ ಮೇವು ಹಾಗೂ ಸುಮಾರು 350 ಕಿಲೋ ಹಿಂಡಿಯನ್ನು ಸಮರ್ಪಿಸಲಾಯಿತು.

ಗೋವುಗಳಿಗೆ ಮೇವು ಸಮರ್ಪಿಸಲು ಬಂದಂತಹ ಭಜನಾ ಪರಿಷತ್ತಿನ ಪದಾಧಿಕಾರಿಗಳನ್ನು ಹಾಗೂ ಸದಸ್ಯರುಗಳನ್ನು ಗೋಶಾಲೆಯ ಅಧ್ಯಕ್ಷ ನಾರಾಯಣಗೌಡ ಕೋಳಂಬೆ, ಉಪಾಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಕಾರ್ಯದರ್ಶಿ ನವೀನ್ ನೆರಿಯ, ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಅಧ್ಯಕ್ಷ ಜನಾರ್ದನ ಗೌಡ ಕಲ್ಕಟ್ಟ, ಕಾರ್ಯದರ್ಶಿ ದಾಮೋದರ ಗೌಡ ಪುದುವೆಟ್ಟು ಹಾಗೂ ಇತರರು ಪ್ರೀತಿಯಿಂದ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಇದರ ನೇತೃತ್ವವನ್ನು ವಹಿಸಿದ್ದ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ತಾಲೂಕು ಅಧ್ಯಕ್ಷ ರವಿರಾಜ್ ಚಾರ್ಮಾಡಿ, ತಾಲೂಕು ಗೌರವಾಧ್ಯಕ್ಷ ವೆಂಕಟೇಶ್ ಭಟ್ ಕಜೆ, ಸಲಹೆಗಾರರಾದ ನಾಗೇಶ್ ನೆರಿಯ, ವಲಯ ಅಧ್ಯಕ್ಷರುಗಳಾದ ಕೃಷ್ಣಪ್ಪಗೌಡ, ಪ್ರತಿಮ, ಹರೀಶ್ ಕಳೆಂಜ, ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ನೀತ ಹಾಗೂ ವಲಯದ ಇನ್ನಿತರ ಪದಾಧಿಕಾರಿಗಳು ಮತ್ತೂರು ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಕೇಶವತಿ, ಸಹ ಸಂಚಾಲಕಿ ಶ್ರೀಮತಿ ಚೇತನ ಅಶೋಕ್ , ವೈದ್ಯನಾಥೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ದೀಕ್ಷಿತ್, ಕಾರ್ಯದರ್ಶಿ ಶಶಿಧರ ಹಾಗೂ ಹಲವಾರು ಭಜಕರು ಜೊತೆಗಿದ್ದರು.

ನಂದಗೋಕುಲ ಗೋಶಾಲೆಯ ಕಾರ್ಯದರ್ಶಿ ನವೀನ್ ನೆರಿಯ ರವರು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ ಹಾಗೂ ವಲಯ ಸಮಿತಿಯವರು ಸೇರಿಕೊಂಡು ತಾಲೂಕಿನ ಸಮಸ್ತ ಭಜಕರ ಪರವಾಗಿ ಇಂದು ನಮ್ಮ ಗೋಶಾಲೆಯ ಗೋವುಗಳಿಗೆ ಆಹಾರವನ್ನು ಒದಗಿಸಿಕೊಟ್ಟು ಪುಣ್ಯ ಕಾರ್ಯದಲ್ಲಿ ಕೈಜೋಡಿಸಿ ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೊಟ್ಟಿದ್ದೀರಿ. ಇಂತಹ ಉತ್ತಮ ಜನಪರ ಕೆಲಸಗಳನ್ನು ಮಾಡಲು ತಮಗೆಲ್ಲರಿಗೂ ಭಗವಂತ ಇನ್ನಷ್ಟು ಶಕ್ತಿಯನ್ನು ನೀಡಲಿ ಎಂದು ಸಂತಸ ವ್ಯಕ್ತಪಡಿಸಿದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!