ಮದ್ದಡ್ಕ: ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ 41ನೇ ವಾರ್ಷಿಕ ಸಾಮಾನ್ಯ ಸಭೆ ಮದ್ದಡ್ಕ ಸುವರ್ಣಸೌಧ ಸಭಾ ಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದಲ್ಲಿ ರೂ. 3.88ಕೋಟಿ ವ್ಯವಹಾರಗಳ ಗಳಿಸಿದ್ದು ರೂ. 20.16ಲಕ್ಷ ಲಾಭ ಗಳಿಸಿ ಸದಸ್ಯರಿಗೆ ಶೇ.65 ಬೋನಸ್, ಶೇ.25 ಡಿವಿಡೆಂಡ್ ಘೋಷಿಸಿದರು.
ಸಭೆಯಲ್ಲಿ ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್.ನಿರ್ದೇಶಕರಾದ ಅಣ್ಣಿ ಶೆಟ್ಟಿ, ರಮೇಶ್ ಪೂಜಾರಿ, ವಿನೋದ ಶೆಟ್ಟಿ, ಮೋಹನ್ ನಾಯ್ಕ, ಶಿವಪ್ಪ ಗೌಡ, ಶಶಿಕಲಾ, ಕಾಂತಪ್ಪ ಮೂಲ್ಯ, ರುದೇಶ್ ಕುಮಾರ್, ನಾರಾಯಣ ಮೂಲ್ಯ, ವಸಂತಿ, ಉಪಸ್ಥಿತರಿದ್ದರು. ದ.ಕ ಜಿ.ಹಾ.ಉ.ಒಕ್ಕೂಟ ದ ವಿಸ್ತರಣಾಧಿಕಾರಿ ರಾಜೇಶ್ ಪಿ ಕೆ ರೈತರಿಗೆ ಮಾಹಿತಿ ನೀಡಿದರು. ಸಂಘದ ಸದಸ್ಯರ ಮಕ್ಕಳಾದ ಎಸ್ಎಸ್ಎಲ್ಸಿ ಹಾಗೂ ಪಿ.ಯುಸಿ ಯವರಿಗೆ ತಲಾ 2000ರಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.
ನಿರ್ದೇಶಕ ಚಿದಾನಂದ ಸ್ವಾಗತಿಸಿ, ಕಾರ್ಯದರ್ಶಿ ಪವಿತ್ರ ವರದಿ ಹಾಗೂ ಲೆಕ್ಕಪತ್ರ ಮಂಡಿಸಿ, ಉಪಾಧ್ಯಕ್ಷರಾದ ವಿವೇಕ್ ಸಾಲಿಯಾನ್ ಧನ್ಯವಾದವಿತ್ತರು.











