29.3 C
ಪುತ್ತೂರು, ಬೆಳ್ತಂಗಡಿ
August 31, 2026
Uncategorized

ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಥಮ್ ವಿ. ಶೆಟ್ಟಿಗೆ ಬೆಳ್ಳಿ ಪದಕ

ಉಜಿರೆ:ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ.), ಉಜಿರೆಯ ಪ್ರತಿಭಾವಂತ ಎಂಟನೇ ವಿದ್ಯಾರ್ಥಿ ಪ್ರಥಮ್ ವಿ. ಶೆಟ್ಟಿ ಅವರು ರಾಯಚೂರಿನ ಫೆಡರಲ್ ಪಬ್ಲಿಕ್ ಸಿ.ಬಿ.ಎಸ್.ಇ. ಶಾಲೆಯಲ್ಲಿ ನಡೆದ ಕ್ಲಸ್ಟರ್-VIII ಅಥ್ಲೆಟಿಕ್ಸ್-2026ರ ಅಂಡರ್-14 ಬಾಲಕರ ಶಾಟ್‌ಪುಟ್ ವಿಭಾಗದಲ್ಲಿ ಅತ್ಯುತ್ತಮ ಸಾಧನೆಗೈದು ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ. ಈ ಸಾಧನೆಯ ಮೂಲಕ ಅವರು ಪಂಜಾಬ್ ನ ಪಟಿಯಾಲಾದಲ್ಲಿ ಅ. 15 ರಿಂದ 20ರ ವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ರಾಜಮ್ಮ ಅವರು ತರಬೇತಿ ನೀಡಿರುವ ಪ್ರಥಮ್ ಅವರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಅವರ ಶ್ರಮ, ಶಿಸ್ತು, ನಿರಂತರ ಅಭ್ಯಾಸ ಮತ್ತು ಕ್ರೀಡಾ ಪ್ರತಿಭೆಗೆ ಈ ಯಶಸ್ಸು ಸಾಕ್ಷಿಯಾಗಿದೆ.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಬೆಳ್ತಂಗಡಿ ವಿದಾನಸಭಾ ಕ್ಷೇತ್ರದ ಮಹಿಳಾ ಸದಸ್ಯತ್ವ ನೋಂದಾವಣಾ ಅಭಿಯಾನ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!