28.6 C
ಪುತ್ತೂರು, ಬೆಳ್ತಂಗಡಿ
August 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಋಷಿ ಬಿ . ಶೆಟ್ಟಿ ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆ

ಮಡಂತ್ಯಾರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಆಶ್ರಯದಲ್ಲಿ ಸೆಪ್ಟೆಂಬರ್ 1ರಿಂದ ಮೈಸೂರಿನಲ್ಲಿ ಆರಂಭಗೊಳ್ಳಲಿರುವ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಡಾ. ಕ್ಯಾಪ್ಟನ್ ಕೆ. ತಿಮ್ಮಪ್ಪಯ್ಯ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಗೆ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಇದರ ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ಋಷಿ ಬಿ. ಶೆಟ್ಟಿ ಅವರು ಕೆಎಸ್‌ಸಿಎ ಇಲೆವೆನ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ರಣಜಿ ಟ್ರೋಫಿ ಹಾಗೂ ಉನ್ನತ ಮಟ್ಟದ ಕ್ರಿಕೆಟ್ ಆಟಗಾರರು ಭಾಗವಹಿಸಲಿರುವ ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಋಷಿ ಅವರು ಕೆಎಸ್‌ಸಿಎ ಇಲೆವೆನ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ರಾಷ್ಟ್ರೀಯ ಮಟ್ಟದ ಈ ಪ್ರತಿಷ್ಠಿತ ಪಂದ್ಯಾವಳಿಗೆ ಆಯ್ಕೆಯಾಗಿರುವುದು ಋಷಿ ಅವರ ಕ್ರಿಕೆಟ್ ಪ್ರತಿಭೆ, ನಿರಂತರ ಪರಿಶ್ರಮ ಹಾಗೂ ಸಾಧನೆಗೆ ದೊರೆತ ಮಹತ್ವದ ಮಾನ್ಯತೆಯಾಗಿದ್ದು, ಸೇಕ್ರೆಡ್ ಹಾರ್ಟ್ ಕಾಲೇಜು, ಅವರ ಕುಟುಂಬ ಹಾಗೂ ಜಿಲ್ಲೆಯ ಕ್ರೀಡಾಭಿಮಾನಿಗಳಿಗೆ ಹೆಮ್ಮೆಯ ಸಂಗತಿಯಾಗಿದೆ.

ಬಲಗೈ ಬ್ಯಾಟ್ಸ್‌ಮನ್ ಹಾಗೂ ವಿಕೆಟ್ ಕೀಪರ್ ಆಗಿರುವ ಋಷಿ ಬಿ. ಶೆಟ್ಟಿ ಅವರು ತಮ್ಮ ಕ್ರಿಕೆಟ್ ಜೀವನದಲ್ಲಿ ಹಲವು ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಪುರುಷರ ಕ್ರಿಕೆಟ್ ತಂಡವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದು, ಎರಡು ವರ್ಷಗಳ ಕಾಲ ತಂಡದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಶ್ವವಿದ್ಯಾನಿಲಯ ಮಟ್ಟದಲ್ಲಿ ತಂಡವನ್ನು ಮುನ್ನಡೆಸಿರುವ ಅನುಭವವು ಅವರ ನಾಯಕತ್ವದ ಸಾಮರ್ಥ್ಯ, ಆತ್ಮವಿಶ್ವಾಸ ಹಾಗೂ ಕ್ರೀಡಾ ಮನೋಭಾವಕ್ಕೆ ಸಾಕ್ಷಿಯಾಗಿದೆ.

ಇದರೊಂದಿಗೆ ಋಷಿ ಅವರು ಕೆಎಸ್‌ಸಿಎ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಆಡಿರುವ ಅನುಭವ ಹೊಂದಿದ್ದು, ಕೆಎಸ್‌ಸಿಎ ಅಂತರ ವಲಯ ಪಂದ್ಯಾವಳಿಗಳಲ್ಲಿಯೂ ಭಾಗವಹಿಸಿದ್ದಾರೆ. 14, 16, 19 ಹಾಗೂ 23 ವರ್ಷ ವಯೋಮಿತಿಯ ವಿವಿಧ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸಿರುವ ಅವರು, ಹಲವು ಸಂದರ್ಭಗಳಲ್ಲಿ ತಂಡದ ನಾಯಕತ್ವದ ಜವಾಬ್ದಾರಿಯನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮುಲ್ಕಿ ದಯಾನಂದ ಕಾಮತ್ ಸ್ಮಾರಕ ಮಂಗಳೂರು ವಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ತಂಡವು ಸತತ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ ಸಾಧನೆ ಮಾಡಿದೆ. ಈ ನಾಲ್ಕೂ ವರ್ಷಗಳ ತಂಡದ ಯಶಸ್ಸಿನಲ್ಲಿ ಋಷಿ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದು, ತಂಡದ ಗೆಲುವಿನ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.

Related posts

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya
error: Content is protected !!