September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿ ಕುಸಿದು ನಿರ್ಮಾಣವಾದ ಗುಂಡಿಯನ್ನು ಪಟ್ಟಣ ಪಂಚಾಯತದಿಂದ ಮುಚ್ಚಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ.

ಕೋರ್ಟು ರಸ್ತೆಯ ಎರಡು ಬದಿಗೆ ರಸ್ತೆ ಕುಸಿತವಾಗಿ ವಾಹನ ಸವಾರರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯ ಉಂಟಾಗಿತ್ತು. ಒಂದು ಬದಿಯ ಗುಂಡಿಯನ್ನು ಪಂಚಾಯತು ವತಿಯಿಂದ ಈ ಹಿಂದೆ ಮುಚ್ಚಿ ಸರಿಪಡಿಸಲಾಗಿತ್ತು. ಇನ್ನೊಂದು ಬದಿಯ ಗುಂಡಿಯೂ ಇತ್ತಿಚೇಗೆ ಸುರಿದ ಮಳೆಗೆ ಕುಸಿತಕ್ಕೊಳಗಾಗಿ ಅಪಾಯವನ್ನು ತಂದೊಡ್ಡಿತ್ತು. ಇದರ ಬಗ್ಗೆ ಸುದ್ದಿ ಉದಯ ಆನ್‌ಲೈನ್ ನ್ಯೂಸ್‌ನಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಜೊತೆಗೆ ಕೆಡಿಪಿ ಸದಸ್ಯ ಹಾಗೂ ಪಟ್ಟಣ ಪಂಚಾಯತು ಮಾಜಿ ಸದಸ್ಯ ಜಗದೀಶ್ ಡಿ. ಇದರ ದುರಸ್ತಿಗೆ ಪಂಚಾಯತಕ್ಕೆ ಮನವಿ ನೀಡಿದ್ದರು. ಪಂಚಾಯತದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಇದೀಗ ಪಟ್ಟಣ ಪಂಚಾಯತು ವತಿಯಿಂದ ರಸ್ತೆ ಕುಸಿತದ ಹೊಂಡಕ್ಕೆ ಕಲ್ಲು ತುಂಬಿಸಿ ದುರಸ್ತಿಗೊಳಿಸಿದ್ದಾರೆ.

Related posts

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಮಹಿಳಾ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!