September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿ ಕುಸಿದು ನಿರ್ಮಾಣವಾದ ಗುಂಡಿಯನ್ನು ಪಟ್ಟಣ ಪಂಚಾಯತದಿಂದ ಮುಚ್ಚಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ.

ಕೋರ್ಟು ರಸ್ತೆಯ ಎರಡು ಬದಿಗೆ ರಸ್ತೆ ಕುಸಿತವಾಗಿ ವಾಹನ ಸವಾರರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯ ಉಂಟಾಗಿತ್ತು. ಒಂದು ಬದಿಯ ಗುಂಡಿಯನ್ನು ಪಂಚಾಯತು ವತಿಯಿಂದ ಈ ಹಿಂದೆ ಮುಚ್ಚಿ ಸರಿಪಡಿಸಲಾಗಿತ್ತು. ಇನ್ನೊಂದು ಬದಿಯ ಗುಂಡಿಯೂ ಇತ್ತಿಚೇಗೆ ಸುರಿದ ಮಳೆಗೆ ಕುಸಿತಕ್ಕೊಳಗಾಗಿ ಅಪಾಯವನ್ನು ತಂದೊಡ್ಡಿತ್ತು. ಇದರ ಬಗ್ಗೆ ಸುದ್ದಿ ಉದಯ ಆನ್‌ಲೈನ್ ನ್ಯೂಸ್‌ನಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಜೊತೆಗೆ ಕೆಡಿಪಿ ಸದಸ್ಯ ಹಾಗೂ ಪಟ್ಟಣ ಪಂಚಾಯತು ಮಾಜಿ ಸದಸ್ಯ ಜಗದೀಶ್ ಡಿ. ಇದರ ದುರಸ್ತಿಗೆ ಪಂಚಾಯತಕ್ಕೆ ಮನವಿ ನೀಡಿದ್ದರು. ಪಂಚಾಯತದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಇದೀಗ ಪಟ್ಟಣ ಪಂಚಾಯತು ವತಿಯಿಂದ ರಸ್ತೆ ಕುಸಿತದ ಹೊಂಡಕ್ಕೆ ಕಲ್ಲು ತುಂಬಿಸಿ ದುರಸ್ತಿಗೊಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya
error: Content is protected !!