ಬೆಳ್ತಂಗಡಿ: ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ಬಾಲಕೃಷ್ಣ ನಾಯ್ಕ ರವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸೆರೆಯಾಗಿರುವ ಘಟನೆ ಸೆ.1 ರಂದು ಬೆಳಗ್ಗೆ ನಡೆದಿದೆ.
ಚಿರತೆಯನ್ನು ಸ್ಥಳಾಂತರ ಮಾಡುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ನಡೆಸಲಿದೆ. ಕೆಲ ಸಮಯದ ಹಿಂದೆ ಸ್ಥಳೀಯ ನಿವಾಸಿ ಗುರಿಕಂಡ ಆನಂದ ಶೆಟ್ಟಿ ಅವರ ಮನೆಯಲ್ಲಿ ಇಟ್ಟ ಬೋನಿಗೆ ಕೂಡ 2 ಚಿರತೆಗಳು ಸೆರೆಯಾಗಿದ್ದವು.











