September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

ನಾರಾವಿ: ಮಕ್ಕಳ ಪಾಲನೆ, ಪೋಷಣೆ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರ ವಿದಾಯ ಸಮಾರಂಭವು ನಾರಾವಿ ವಲಯದ ಅಂಗನವಾಡಿ ಶಿಕ್ಷಕಿಯರ ವತಿಯಿಂದ ಗೌರವಪೂರ್ವಕವಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಪ್ರಿಯ ಆಗ್ನೇಸ್ ವಹಿಸಿದರು. ಮುಖ್ಯ ಅತಿಥಿಯಾಗಿ ವಲಯದ ಮೇಲ್ವಿಚಾರಕಿ ಕಾತ್ಯಾಯಿನಿ, ತಾಲೂಕು ಅಂಗನವಾಡಿ ಸಂಘಟನೆಯ ಅಧ್ಯಕ್ಷೆ ಗಾಯತ್ರಿದೇವಿ, ನಿವೃತ್ತ ಸನ್ಮಾನವನ್ನು ಸ್ವೀಕರಿಸುವ ಶಿಕ್ಷಕಿ ಸುಮಿತ್ರ ಭಾಗವಹಿಸಿದರು.

ಸೀತಮ್ಮ ಪ್ರಾರ್ಥಿಸಿ, ತಾಲೂಕು ಅಂಗನವಾಡಿ ಸಂಘಟನೆಯ ಕಾರ್ಯದರ್ಶಿ ಅರುಣ ಕುಮಾರಿ ಬಿ ರವರು ಸನ್ಮಾನ ಪತ್ರ ಓದಿ. ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಸ್ವಾಗತಿಸಿದರು. ಗಾಯತ್ರಿದೇವಿ, ಜಯಲಕ್ಷ್ಮೀ, ದೇವಿ, ಮೀನಾ, ಲಲಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯದ ಎಲ್ಲಾ ಶಿಕ್ಷಕಿಯರು ಭಾಗವಹಿಸಿ , ಅಭಿನಂದನೆ ಸಲ್ಲಿಸಿ, ನಿವೃತ್ತ ಜೀವನಕ್ಕೆ ಶುಭಹಾರೈಸಿ ಬೀಳ್ಕೊಟ್ಟರು. ಶಿಕ್ಷಕಿ ಅನುಜ್ಞಾ ವಂದಿಸಿದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya
error: Content is protected !!