September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

ನಾರಾವಿ: ಮಕ್ಕಳ ಪಾಲನೆ, ಪೋಷಣೆ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರ ವಿದಾಯ ಸಮಾರಂಭವು ನಾರಾವಿ ವಲಯದ ಅಂಗನವಾಡಿ ಶಿಕ್ಷಕಿಯರ ವತಿಯಿಂದ ಗೌರವಪೂರ್ವಕವಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಪ್ರಿಯ ಆಗ್ನೇಸ್ ವಹಿಸಿದರು. ಮುಖ್ಯ ಅತಿಥಿಯಾಗಿ ವಲಯದ ಮೇಲ್ವಿಚಾರಕಿ ಕಾತ್ಯಾಯಿನಿ, ತಾಲೂಕು ಅಂಗನವಾಡಿ ಸಂಘಟನೆಯ ಅಧ್ಯಕ್ಷೆ ಗಾಯತ್ರಿದೇವಿ, ನಿವೃತ್ತ ಸನ್ಮಾನವನ್ನು ಸ್ವೀಕರಿಸುವ ಶಿಕ್ಷಕಿ ಸುಮಿತ್ರ ಭಾಗವಹಿಸಿದರು.

ಸೀತಮ್ಮ ಪ್ರಾರ್ಥಿಸಿ, ತಾಲೂಕು ಅಂಗನವಾಡಿ ಸಂಘಟನೆಯ ಕಾರ್ಯದರ್ಶಿ ಅರುಣ ಕುಮಾರಿ ಬಿ ರವರು ಸನ್ಮಾನ ಪತ್ರ ಓದಿ. ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಸ್ವಾಗತಿಸಿದರು. ಗಾಯತ್ರಿದೇವಿ, ಜಯಲಕ್ಷ್ಮೀ, ದೇವಿ, ಮೀನಾ, ಲಲಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ನಾರಾವಿ ವಲಯದ ಎಲ್ಲಾ ಶಿಕ್ಷಕಿಯರು ಭಾಗವಹಿಸಿ , ಅಭಿನಂದನೆ ಸಲ್ಲಿಸಿ, ನಿವೃತ್ತ ಜೀವನಕ್ಕೆ ಶುಭಹಾರೈಸಿ ಬೀಳ್ಕೊಟ್ಟರು. ಶಿಕ್ಷಕಿ ಅನುಜ್ಞಾ ವಂದಿಸಿದರು.

Related posts

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಕಛೇರಿ ಸಿಬ್ಬಂದಿ ವಿಜಯ ಕುಮಾರಿ ರವರಿಗೆ ಬೀಳ್ಕೊಡುಗೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya
error: Content is protected !!