September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯಿಂದ ರಕ್ಷಾ ಬಂಧನ ಆಚರಣೆ

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಆ. 29ರಂದು ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ರಕ್ಷಾ ಬಂಧನ ಆಚರಣಾ ಕಾರ್ಯಕ್ರಮವು ನಡೆಯಿತು. ಮುಖ್ಯ ಅಥಿತಿಗಳಾಗಿ ಕೇಶವ ಎಂ.ಕೆ. ನೇರೋಳುಪಲ್ಕೆ ಭಾಗವಹಿಸಿದ್ದರು.

ಮಂಡಳಿಯ ಗೌರವಾಧ್ಯಕ್ಷ ಸದಾನಂದ ಶೆಟ್ಟಿ ಮಡಪ್ಪಾಡಿ ರಕ್ಷಾಬಂಧನದ ಧಾರ್ಮಿಕ ಹಿನ್ನಲೆ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಬೆಳ್ತಂಗಡಿ ಕುಣಿತಾ ತರಬೇತುದಾರರ ತಂಡದ ಅಧ್ಯಕ್ಷ ಸಂದೇಶ್ ಮದ್ದಡ್ಕ ಇವರು ರಕ್ಷಾಬಂಧನದ ಆಚರಣೆ ಮತ್ತು ಪ್ರಸಕ್ತ ಕಾಲಘಟ್ಟದಲ್ಲಿ ಭ್ರಾತುತ್ವದ ಆಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅಮೂಲ್ಯ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಂಡಳಿಯ ಅಧ್ಯಕ್ಷ ವಸಂತ ಮಡಕ್ಕಿಲ, ಮಹಿಳಾ ಕುಣಿತ ಭಜನಾ ಮಂಡಳಿಯ ಅಧ್ಯಕ್ಷ ಶ್ರೀಮತಿ ಪ್ರಮೀಳಾ ಕುದ್ರಡ್ಕ, ಪುರುಷೋತ್ತಮ ಶೆಟ್ಟಿ ಮಡಪ್ಪಾಡಿ, ಶಿವರಾಮ ಆಚಾರ್ಯ ಕುದ್ರಡ್ಕ, ಮೋಹನಂದ ಮಾನ್ಯ, ಕುಣಿತ ಭಜನಾ ತರಭೇತುದಾರರಾದ ಆಕಾಶ್, ಮಂಡಳಿಯ ಸದಸ್ಯರು, ಪೋಷಕರು, ಭಗವಧ್ಭಕ್ತರು ಮತ್ತು ಭಜನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಂಡಳಿಯ ಕಾರ್ಯದರ್ಶಿ ಸಂಪತ್ ಪಿಜಕೂಡಂಗೆ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ಧನ್ಯವಾದ ನೆರವೇರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಕಕ್ಕಿಂಜೆ ಯುವಕ ಆಲ್ವಿನ್ ಸಿ. ಜೆ ಗೆ ಅಂತರರಾಷ್ಟ್ರೀಯ ಮಟ್ಟದ “ಯುವ ವಿಜ್ಞಾನಿ ಪ್ರಶಸ್ತಿ” ಗೌರವ

Suddi Udaya
error: Content is protected !!