September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋರ್ಟು ರಸ್ತೆಯ ಅಪಾಯಕಾರಿ ಗುಂಡಿಯನ್ನು ಮುಚ್ಚಿ ಸಂಚಾರ ಸುಗಮಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿ ಕುಸಿದು ನಿರ್ಮಾಣವಾದ ಗುಂಡಿಯನ್ನು ಪಟ್ಟಣ ಪಂಚಾಯತದಿಂದ ಮುಚ್ಚಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ.

ಕೋರ್ಟು ರಸ್ತೆಯ ಎರಡು ಬದಿಗೆ ರಸ್ತೆ ಕುಸಿತವಾಗಿ ವಾಹನ ಸವಾರರಿಗೆ ಹಾಗೂ ಪಾದಾಚಾರಿಗಳಿಗೆ ಅಪಾಯ ಉಂಟಾಗಿತ್ತು. ಒಂದು ಬದಿಯ ಗುಂಡಿಯನ್ನು ಪಂಚಾಯತು ವತಿಯಿಂದ ಈ ಹಿಂದೆ ಮುಚ್ಚಿ ಸರಿಪಡಿಸಲಾಗಿತ್ತು. ಇನ್ನೊಂದು ಬದಿಯ ಗುಂಡಿಯೂ ಇತ್ತಿಚೇಗೆ ಸುರಿದ ಮಳೆಗೆ ಕುಸಿತಕ್ಕೊಳಗಾಗಿ ಅಪಾಯವನ್ನು ತಂದೊಡ್ಡಿತ್ತು. ಇದರ ಬಗ್ಗೆ ಸುದ್ದಿ ಉದಯ ಆನ್‌ಲೈನ್ ನ್ಯೂಸ್‌ನಲ್ಲಿ ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಜೊತೆಗೆ ಕೆಡಿಪಿ ಸದಸ್ಯ ಹಾಗೂ ಪಟ್ಟಣ ಪಂಚಾಯತು ಮಾಜಿ ಸದಸ್ಯ ಜಗದೀಶ್ ಡಿ. ಇದರ ದುರಸ್ತಿಗೆ ಪಂಚಾಯತಕ್ಕೆ ಮನವಿ ನೀಡಿದ್ದರು. ಪಂಚಾಯತದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಇದೀಗ ಪಟ್ಟಣ ಪಂಚಾಯತು ವತಿಯಿಂದ ರಸ್ತೆ ಕುಸಿತದ ಹೊಂಡಕ್ಕೆ ಕಲ್ಲು ತುಂಬಿಸಿ ದುರಸ್ತಿಗೊಳಿಸಿದ್ದಾರೆ.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣ: ಕಣ್ಣೂರಿನ ತಂಗಚ್ಚ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರ ಮನವಿ

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!