ಬೆಳ್ತಂಗಡಿ: ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು ಇಲ್ಲಿ ನಡೆದ, ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 14 ವಯೋಮಾನದ ಬಾಲಕರ ವಿಭಾಗದಲ್ಲಿ, ನವಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಆಕಾಶ್ ಹಾಗೂ ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ಸೌರಭ್ ನಾಯಕ್ ಇವರು ಪಡೆದುಕೊಂಡರು. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.











