ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಇಂದು (ಸೆ.1) ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವರಿಗೆ ಸಮರ್ಪಿಸಲಾಯಿತು. ಬಳಿಕ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸೂರಜ್ ನೆಲ್ಲಿತ್ತಾಯ ಅವರು ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕರುಣಾಕರ ಶಿಶಿಲ, ಉಪಾಧ್ಯಕ್ಷ ಸುಬ್ರಾಯ ಗೌಡ, ಶ್ರೀ ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಸುನಿಲ್ ಗೋಖಲೆ, ಧಾರ್ಮಿಕ ಮುಖಂಡರಾದ ಜಯರಾಮ ನೆಲ್ಲಿತ್ತಾಯ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ಶಿಶಿಲ, ಗಣೇಶ್ ಧರ್ಮದಕಳ,ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್ ಅಮ್ಮುಡಂಗೆ, ಒಕ್ಕೂಟದ ಸೇವಾ ಪ್ರತಿನಿಧಿ ಗಾಯತ್ರಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಇವರೊಂದಿಗೆ ಗಿರಿಜಾ ಕೆದಿಲಾಯ, ಪುಷ್ಪಲತಾ, ವನಜಾ ಐಗುಂಡ, ಅಕ್ಷತಾ ವಟ್ಲ, ಮಾಧವ ದೇನೋಡಿ, ಕೃಷ್ಣಪ್ಪ ಮುಚ್ಚಿರಡ್ಕ, ಶೀನಪ್ಪ ಮುಚ್ಚಿರಡ್ಕ, ಪುನೀತ್ ದೇನೋಡಿ, ಸುಂದರ ಎಂ.ಕೆ. ಕಾಲನಿ, ನಾಗರಾಜ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಶ್ರೀರಾಮ ಕಾರಂತ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.











