28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ – ಭಾರತ ಮತ್ತು ಜಪಾನ್

ಉಜಿರೆ: ಭಾರತ ಮತ್ತು ಜಪಾನ್ ನಡುವಿನ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದ ಅಂಗವಾಗಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಕಲಾ ವಿಭಾಗದ ವಿದ್ಯಾರ್ಥಿಗಳೊಂದಿಗೆ ಜಪಾನಿನ ತಂಡವೊಂದು ಒಂದು ತಿಂಗಳ ಕಾಲ ಎಸ್.ಡಿ.ಎಂ. (ಸ್ವಾಯತ್ತ) ಪದವಿ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದೆ.

ಈ ತಂಡವು ಇಂದು ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಭೇಟಿ ನೀಡಿ, ವಿದ್ಯಾರ್ಥಿನಿಯರು ತಯಾರಿಸಿದ ವಿಶೇಷ ಹೊಲಿಗೆ ವಿನ್ಯಾಸಗಳು ಹಾಗೂ ಕರಕುಶಲ ವಸ್ತುಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿತು. ನಂತರ ಜಪಾನ್‌ನಲ್ಲಿ ತಯಾರಿಸುವ ಉಡುಪುಗಳು, ಉಣ್ಣೆಯ ಬ್ಯಾಗ್‌ಗಳು, ವಿವಿಧ ಕರಕುಶಲ ವಸ್ತುಗಳು ಹಾಗೂ ಕೈಮಗ್ಗದ ಕುರಿತು ಮಾಹಿತಿಯನ್ನು ಹಂಚಿಕೊಂಡರು.

ಸಿರಿ ಸಂಸ್ಥೆಯ ಮಾಜಿ ನಿರ್ದೇಶಕಿ, ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷೆ ಹಾಗೂ ಜಪಾನ್ ತಂಡದ ಸಂಚಾಲಕಿ ಮನೋರಮ ಅವರು ಕಾರ್ಯಕ್ರಮಕ್ಕೆ ಸೂಕ್ತ ಸಹಕಾರ ನೀಡಿ, ಜಪಾನ್ ತಂಡದ ಭೇಟಿಯ ಉದ್ದೇಶಗಳನ್ನು ಹಂಚಿಕೊಂಡರು. ಕರಾವಳಿಯ ಹೆಮ್ಮೆಯ ಕಲೆಯಾದ ಯಕ್ಷಗಾನ ಹಾಗೂ ಸ್ಥಳೀಯ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಪರಿಚಯಿಸುತ್ತಿರುವ ಎಸ್‌ಡಿಎಂ ಕಾಲೇಜಿನ ಬಿ.ಎ. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ಸಂಜನಾ ಅವರು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಭೇಟಿಯು ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯ ವಿದ್ಯಾರ್ಥಿನಿಯರು ಮತ್ತು ಜಪಾನಿನ ತಂಡದ ನಡುವೆ ಪರಸ್ಪರ ಸಂವಹನ, ಸಂಸ್ಕೃತಿ, ಸಂಪ್ರದಾಯ, ಅನುಭವ ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲು ಉತ್ತಮ ಅವಕಾಶವನ್ನು ಒದಗಿಸಿತು.

ಈ ರೀತಿಯ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳು ಸ್ನೇಹ, ಪರಸ್ಪರ ತಿಳುವಳಿಕೆ ಮತ್ತು ಅಂತರರಾಷ್ಟ್ರೀಯ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಸಹಕಾರಿಯಾಗುತ್ತವೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ವಿ. ಪ್ರಕಾಶ್ ಕಾಮತ್ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya
error: Content is protected !!